Wed. Mar 12th, 2025

Subrahmanya: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ – ದ್ವಿಚಕ್ರ ವಾಹನ ಸವಾರ ಸಾವು!!

ಸುಬ್ರಹ್ಮಣ್ಯ: (ಮಾ.11) ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ.

ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (24 ವ.) ಮೃತಪಟ್ಟವರು.
ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ಸ್ಕೂಟರ್ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ ಅಪಘಾತ ಸಂಭವಿಸಿದೆ.

ಗಂಭೀರ ಗಾಯಗೊಂಡಿದ್ದ ವಿನ್ಯಾಸ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿನ್ಯಾಸ್ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *