Thu. May 1st, 2025

Uppinangady: ಕೆ.ಎಸ್‌.ಆರ್‌.ಟಿ.ಸಿ ಬಸ್ & ಲಾರಿ ಮುಖಾಮುಖಿ ಡಿಕ್ಕಿ – ಆರು ಮಂದಿಗೆ ಗಾಯ

ಉಪ್ಪಿನಂಗಡಿ:(ಮಾ.14) ಲಾರಿ ಹಾಗೂ ಕೆ.ಎಸ್‌.ಆರ್‌.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಉಪ್ಪಿನಂಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಬಳಿ ನಡೆದಿದೆ. ಡಿಕ್ಕಿಯಾದ ಪರಿಣಾಮ ಶಾಲಾ ಮಕ್ಕಳ ಸಹಿತ ಬಸ್ಸಿನಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ⭕ಮಂಗಳೂರು: ಮಾದಕ ವಸ್ತು, ಅಕ್ರಮ ಶಸ್ತ್ರಾಸ್ತ್ರ ಮಾರಾಟ

ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ತಿರುವು ಪಡೆದು ಬಸ್‍ನಿಲ್ದಾಣಕ್ಕೆಂದು ಅಂಡರ್‌ಪಾಸ್‌ನಿಂದ ತುಸು ಮುಂದೆ ಹೋಗುತ್ತಿದ್ದಂತೆ ಮಂಗಳೂರು ಕಡೆಯಿಂದ ಹಾಸನ ಕಡೆಗೆ ಸರ್ವೀಸ್ ರಸ್ತೆ ಮೂಲಕ ಬರುತ್ತಿದ್ದ ಲಾರಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಬಸ್ಸಿನಲ್ಲಿದ್ದ ಮುದಾಸ್ಸೀರ್ (20) , ಅಜ್ಮಲ್ ಹುಸೇನ್ (19) , ಕೀರ್ತನ್ (20) , ಅಫ್ತಾರ್‍ಖಾನ್ (19) , ಫಾತಿಮಾ (19) , ಉನೈಸ್(19) ಎಂಬವರು ಗಾಯಗೊಂಡು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಈ ಪೈಕಿ ಹಳೆನೇರೆಂಕಿ ನಿವಾಸಿ ಕೀರ್ತನ್‌ಗೆ ಗಂಭೀರ ಗಾಯವಾಗಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *