Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Mangaluru: ಮರದ ಕೊಂಬೆ ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

ಮಂಗಳೂರು (ಮಾ.18): ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ದೈತ್ಯಾಕಾರದ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸೋಮವಾರ ಸಂಜೆ ನಡೆದಿದೆ.

ಇದನ್ನೂ ಓದಿ: ⭕ಚಾಮರಾಜನಗರ: ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ

ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18), ಫಾಹಿಮಾ ಮರಿಯಂ (17) ಹಾಗೂ ಅಬ್ಬೆಟ್ಟು ಅಫ್ರತ್ (18) ಗಾಯಗೊಂಡವರು. ಈ ಪೈಕಿ ಅಫ್ರತ್‌ಗೆ ಹೆಚ್ಚು ಗಾಯವಾಗಿದೆ.

ಬಲ್ಮಠದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರಾಗಿರುವ ಇವರು ಸೋಮವಾರ ಸಂಜೆ ಸುಮಾರು 4:30ಕ್ಕೆ ಬಳಿ ಮನೆಗೆ ತೆರಳಲು ಸಂಜೆ 4:30ಕ್ಕೆ ಬಸ್ಸಿಗೆ ಕಾಯುತ್ತಿದ್ದಾಗ ಮರದ ಕೊಂಬೆ ಬಿತ್ತು ಎನ್ನಲಾಗಿದೆ. ಇದು ಜನನಿಬಿಡ ಪ್ರದೇಶವಾಗಿದ್ದು, ಬಹುತೇಕ ಮಂದಿ ಅಪಾಯದಿಂದ ಪಾರಾಗಿದ್ದಾರೆ.


ಈ ಘಟನೆಯಲ್ಲಿ ಇನ್ನೂ ಕೆಲವರಿಗೆ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮರದ ಕೊಂಬೆ ಮುರಿದು ಬಿದ್ದ ಬಗ್ಗೆ ಮಾಹಿತಿ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗವು ಮರದ ಕೊಂಬೆಗಳನ್ನು ತೆರವುಗೊಳಿಸಿತು.

Leave a Reply

Your email address will not be published. Required fields are marked *