Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Udupi: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣ – ಇಬ್ಬರು ಮಹಿಳೆಯರ ಬಂಧನ, ಇಬ್ಬರು ಪೊಲೀಸರ ಅಮಾನತು

ಉಡುಪಿ:(ಮಾ.21) ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದ ಮೇಲೆ ದಲಿತ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮತ್ತಿಬ್ಬರು ಆರೋಪಿಗಳಾದ ಲೀಲಾ ಮತ್ತು ಪಾರ್ವತಿ ಅವರನ್ನು ಮಲ್ಪೆ ಪೊಲೀಸರು ಬಂಧನ ಮಾಡಿದ್ದಾರೆ.

ಇದನ್ನೂ ಓದಿ: ⭕Allahabad High Court: ಹುಡುಗಿಯ ಖಾಸಗಿ ಅಂಗಗಳನ್ನು ಸ್ಪರ್ಶಿಸುವುದು ಅತ್ಯಾಚಾರವಲ್ಲ -ಅಲಹಾಬಾದ್ ಹೈಕೋರ್ಟ್!!

ಈ ಘಟನೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಡಿ ಠಾಣೆಯ ಹೆಡ್‌ ಕಾನ್ಸ್‌ಸ್ಟೇಬಲ್‌ ಸುರೇಶ್‌ ಹಾಗೂ ಕಾನ್ಸ್‌ಸ್ಟೇಬಲ್‌ ನಾಗರಾಜ್‌ ಅವರನ್ನು ಅಮಾನತು ಮಾಡಲಾಗಿದೆ.

ಈಗಾಗಲೇ ಬಂಧಿತರಾದ ಲಕ್ಷ್ಮೀಬಾಯಿ, ಸುಂದರ್‌, ಮತ್ತು ಶಿಲ್ಪಾ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಐದು ಮಂದಿಯನ್ನು ಈ ಪ್ರಕರಣದಲ್ಲಿ ಬಂಧನ ಮಾಡಲಾಗಿದೆ.

    ಈ ಪ್ರಕರಣವನ್ನು ರಾಜೀ ಸಂಧಾನದಲ್ಲಿ ಮುಗಿಸಲು ಪ್ರಯತ್ನ ನಡೆಯುತ್ತಿರುವ ಕುರಿತು ವರದಿಯಾಗಿದೆ. ಆದರೆ ಇದನ್ನು ಕಾನೂನಿನ ಚೌಕಟ್ಟಿನಲ್ಲಿ ಮಾತ್ರ ಮಾಡಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಈ ಘಟನೆ ಸಂಬಂಧ ಮಹಿಳಾ ಆಯೋಗ ಕೂಡಾ ಎಂಟ್ರಿ ನೀಡಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಲು ಸೂಚನೆ ನೀಡಲಾಗಿರುವ ಕುರಿತು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವರದಿ ಸಲ್ಲಿಸಲು ತಿಳಿಸಿದೆ.

    Leave a Reply

    Your email address will not be published. Required fields are marked *