Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Belal: ಕುಟುಂಬದವರ ಸಮ್ಮುಖದಲ್ಲಿ ಕಾಡಿನಲ್ಲಿ ಸಿಕ್ಕ ಮಗುವಿನ ತಂದೆ ತಾಯಿಯ ವಿವಾಹ!

ಬೆಳಾಲು, ಎ.7( ಯು ಪ್ಲಸ್ ಟಿವಿ): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆಳಾಲು ಗ್ರಾಮದ ಕೊಡೋಳುಕೆರೆ – ಮುಂಡ್ರೋಟ್ಟು ರಸ್ತೆಯಲ್ಲಿ ಮಾರ್ಚ್.22 ರ ಶನಿವಾರದಂದು ರಂದು ಬೆಳಗ್ಗೆ ಮೂರುವರೆ ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋದ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ.‌

ಇದನ್ನೂ ಓದಿ: ⭕ಪುತ್ತೂರು: ನೀರು ಕೇಳುವ ನೆಪದಲ್ಲಿ ಬಂದು ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಧರ್ಮಸ್ಥಳ ಪೊಲೀಸರು ಮಗುವಿನ ತಂದೆಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಇಬ್ಬರು ಕೂಡ ಸ್ವ ಇಚ್ಛೆಯಿಂದ ಮದುವೆಯಾಗುವುದಾಗಿ ಪೊಲೀಸರ ಮುಂದೆ ರಂಜಿತ್ ಗೌಡ ಒಪ್ಪಿದ್ದಾರೆ ಎನ್ನಲಾಗಿತ್ತು.

ಆ ಮೂಲಕ ಪ್ರಕರಣ ಸುಖಾಂತ್ಯವಾಗಿದೆ. ಎಪ್ರಿಲ್.6 ರಂದು ಎರಡು ಕುಟುಂಬದವರ ಒಪ್ಪಿಗೆಯ ಮೇರೆಗೆ ನಡ ಗ್ರಾಮದ ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ.

ದೇವಸ್ಥಾನದ ಅರ್ಚಕರ ಪೌರೋಹಿತ್ಯದಲ್ಲಿ ಮದುವೆ ನಡೆದಿದೆ. ಎರಡೂ ಕುಟುಂಬದವರು ಈ ಮದುವೆಗೆ ಹಾಜರಿದ್ದರು.

ಬೆಳಾಲು ಮಾಯದ ತಿಮ್ಮಪ್ಪ ಗೌಡರ ಪುತ್ರ ರಂಜಿತ್‌ ಮತ್ತು ಧರ್ಮಸ್ಥಳದ ಕೊಳಂಗಾಜೆ ಧರ್ಣಪ್ಪ ಗೌಡರ ಪುತ್ರಿ ಸುಶ್ಮಿತಾ ಅವರ ವಿವಾಹ ಎ.6 ರಂದು ನಡೆದಿದೆ. ಮಗುವನ್ನು ಮುಂದೆ ಕಾನೂನಾತ್ಮಕವಾಗಿ ಪಡೆಯುವುದಾಗಿ ಕುಟುಂಬದ ಮೂಲಗಳು ತಿಳಿಸಿರುವ ಕುರಿತು ವರದಿಯಾಗಿದೆ.

Leave a Reply

Your email address will not be published. Required fields are marked *