ಬೆಳಾಲು:(ಎ.7) ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ಹತ್ತು ವಿದ್ಯಾರ್ಥಿನಿಯರಿಗೆ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು.

ಇದನ್ನೂ ಓದಿ: ⭕ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರಾದ ಅಭಿಲೇಖ ಪಿ. ಮಂತ್ರಿ, ಕಾರ್ಯದರ್ಶಿ ಶ್ರೀ ಹರ್ಷ ವಸಿಷ್ಠ, ರೋಟರಿಕ್ಲಬ್ ನ ಚುನಾಯಿತ ಅಧ್ಯಕ್ಷರಾದ ಹಾಗೂ ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಯಾದ ಅಶೋಕ್ ಹೆಬ್ಬಾರ್,

ಬೈಸಿಕಲ್ ದಾನಿಗಳಾದ ವಿದ್ಯರಾಜ್ ಶೆಟ್ಟಿ ಬೈಸಿಕಲ್ ಗಳನ್ನು ವಿತರಿಸಿ,ಶುಭಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಗಣೇಶ್ ಕನಿಕ್ಕಿಲ , ಅಧ್ಯಕ್ಷರಾದ ಶಶಿಧರ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.



ಪ್ರಾಸ್ತಾವಿಕ ನುಡಿಗಳೊಂದಿಗೆ ಮುಖ್ಯೋಪಾಧ್ಯಾಯರಾದ ಜಯರಾಮ್ ಮಯ್ಯ ಸ್ವಾಗತಿಸಿದರು. ಶಿಕ್ಷಕ ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
