ಪುತ್ತೂರು :(ಎ.15) ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮಾರ್ಚ್ ತಿಂಗಳ ಮೊತ್ತದಲ್ಲಿ ಅನಾರೋಗ್ಯದಿಂದ ಮನೆಯಲ್ಲಿಯೇ ಇದ್ದು

ಇದನ್ನೂ ಓದಿ: 🟣ಬೆಳ್ತಂಗಡಿ: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ
ತೀವ್ರ ಕಷ್ಟದಲ್ಲಿ ಇರುವ ದಿನಕೂಲಿ ಕಾರ್ಮಿಕರಾಗಿರುವ ಬಾಳಪ್ಪ ಮುಗೇರ ಶಾಂತಿಗೋಡು ಎಂಬವರಿಗೆ ವಜ್ರತೇಜಸ್ ತಂಡದಿಂದ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಸಹಾಯಧನ ನೀಡಲಾಯಿತು.


ಈ ಸಂದರ್ಭದಲ್ಲಿ ವಜ್ರತೇಜಸ್ ಇದರ ಅಧ್ಯಕ್ಷರಾದ ಮುರಳೀಕೃಷ್ಣ ಹಸಂತಡ್ಕ, ವಜ್ರತೇಜಸ್ ಕೋಶಾಧಿಕಾರಿ ಗಣೇಶ್ ಕಾಮತ್ ,ವಿಶ್ವ ಹಿಂದೂ ಪರಿಷದ್ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಪ್ರಮುಖರಾದ ಕೇಶವಪ್ರಸಾದ್, ಪ್ರವೀಣ್ ಕೃಷ್ಣ ಹಸಂತಡ್ಕ ಉಪಸ್ಥಿತರಿದ್ದರು.


