ಗೇರುಕಟ್ಟೆ:(ಎ.23) ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ) ಕರ್ನಾಟಕ, ನೇತ್ರಾವತಿ ವಲಯ, ಮಂಗಳೂರು, ಕಳಿಯ ಶಾಖೆಯ ವತಿಯಿಂದ ಗೇರುಕಟ್ಟೆಯ ಕ್ಷೀರಸಂಗಮ ಸಭಾಭವನದಲ್ಲಿ ದೇಹ ದೇಶ ಧರ್ಮ ಎಂಬ ಶೀರ್ಷಿಕೆ ಯಡಿಯಲ್ಲಿ ಜರಗಿದ 15 ದಿನಗಳ ಮಕ್ಕಳ ವಸಂತ ಚೈತನ್ಯ ತರಗತಿಯ ಸಮಾರೋಪವು ಭಾರತ್ ಮಾತಾ ಪೂಜನದೊಂದಿಗೆ ಸಂಪನ್ನಗೊಂಡಿತು.

ಇದನ್ನೂ ಓದಿ: 🪄🪄ಪುತ್ತೂರು: (ಎ.24) ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮ
ಸಮಾರಂಭದ ಅಧ್ಯಕ್ಷತೆಯನ್ನು ಶಿಕ್ಷಣಾರ್ಥಿ ತನ್ಮಯಕೃಷ್ಣ ವಹಿಸಿದ್ದರು. ಮುಖ್ಯ ಮಾತುಗಾರರಾಗಿದ್ದ ಯೋಗ ಬಂಧು ತುಕಾರಾಮ ಶಿಬಿರದಲ್ಲಿ ಪಡೆದ ಅನುಭವಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಶಿಕ್ಷಣಾರ್ಥಿಗಳಾದ ಆದ್ಯವಿ, ಸನ್ನಿಧಿ, ಅರ್ಜುನ ಮತ್ತು ಪೋಷಕರಾದ ಮಾಜಿ ಯೋಧ ವಿಕ್ರಮ, ಶಿಕ್ಷಕಿ ವಿದ್ಯಾ ಇವರು ಚೈತನ್ಯ ತರಗತಿಯಿಂದ ಮಕ್ಕಳ ದಿನಚರಿಯಲ್ಲಿ ಆದ ಧನಾತ್ಮಕ ಬದಲಾವಣೆಯ ಬಗ್ಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಆರಂಭದಲ್ಲಿ ಶಿಕ್ಷಣಾರ್ಥಿಗಳು, ಪೋಷಕರು, ಯೋಗ ಬಂಧುಗಳು ಅಗ್ನಿಹೋತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಮಾಹಿತಿ ನೀಡಿದರು. ಶಿಕ್ಷಣಾರ್ಥಿಗಳಿಗೆ ಭಗವದ್ಗೀತೆಯ ಪುಸ್ತಕಗಳನ್ನು ವಿತರಿಸಲಾಯಿತು.
ಮುಖ್ಯ ಶಿಕ್ಷಕರೊಂದಿಗೆ ಕೇಂದ್ರದ ಸಹ ಶಿಕ್ಷಕರಾದ ಸುಕೇಶ್, ಚೈತನ್ಯ ತರಗತಿಯ ಶಿಕ್ಷಕರಾದ ಸತೀಶ್ ಮತ್ತು ನಿತಿನ್,ಯೋಗಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ಶಿಬಿರದ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಗೌಡ, ಕಳಿಯ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರಾದ ಸುಭಾಷಿಣಿ, ಶಾಖೆಯ ವರದಿ ಪ್ರಮುಖರಾದ ಕೇಶವ, ಸುಧಾಕರ ಮಜಲು,ರಾಜೇಶ್, ಅಶೋಕ ಆಚಾರ್ಯ, ವಸಂತ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ಪ್ರಣಮ್ಯ ಪ್ರಾರ್ಥಿಸಿ ಅವಿನ್ಯು ಸ್ವಾಗತಿಸಿದರು. ಸನ್ನಿಧಿ ಶಿಬಿರದ ವರದಿ ವಾಚಿಸಿದರು. ಆಕರ್ಷ ಕಾರ್ಯಕ್ರಮ ನಿರೂಪಿಸಿ ಅದ್ವಿತ್ ವಂದಿಸಿದರು. ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.


ಎಲ್ಲಾ ಯೋಗ ಬಂಧುಗಳೊಂದಿಗೆ ಶಾಖೆಯ ಸಂಚಾಲಕ ವಿಜಯ ಕಲಾಯಿದೊಟ್ಟು,ವರದಿ ಪ್ರಮುಖ್ ಕೇಶವ ಪೂಜಾರಿ,ಗಣೇಶ, ಭಾರತಿ,ರೇಖಾ, ಶುಭ ಮಂಗಳ,ಮೀರ, ವಿಶ್ರುತ, ವೈಷ್ಣವಿ, ಸಂಜನಾ,ಕಾವ್ಯ, ಅರುಣ ಶಿಬಿರದುದ್ದಕ್ಕೂ ಸಹಕಾರ ನೀಡಿದ್ದರು.
