ಮಂಗಳೂರು:(ಎ.30) ಮಂಗಳೂರಿನ ಬಳ್ಳಾಲ್ ಬಾಗ್ ಹೋಟೆಲ್ ಪತ್ತುಮುಡಿ ಸಭಾಭವನದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಇದನ್ನೂ ಓದಿ: ☘ಬಂಟ್ವಾಳ : ಯುವವಾಹಿನಿ ಬಂಟ್ವಾಳದ ಸ್ನೇಹ ಸಮ್ಮಿಲನ
ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಕಾರ್ಯದರ್ಶಿಯಾಗಿ ವಿನಯ ಆಚಾರ್ ಹೊಸಬೆಟ್ಟು ಸಂಚಾಲಕರಾಗಿ ಸದಾಶಿವ ಆಳ್ವ ತಲಪಾಡಿ, ಕೋಶಾಧಿಕಾರಿಯಾಗಿ ವಿಜಯ ಶಂಕರ ಆಳ್ವ ಮಿತ್ತಳಿಕೆ, ಉಪಾಧ್ಯಕ್ಷರಾಗಿ ತೋನ್ಸೇ ಪುಷ್ಕಳ ಕುಮಾರ್ ಮತ್ತು ದಿವಾಕರ ಆಚಾರ್ಯ ಗೇರುಕಟ್ಟೆ, ಸಹ ಕಾರ್ಯದರ್ಶಿಗಳಾಗಿ ಮಧುಸೂಧನ ಅಲೆವೂರಾಯ ಮತ್ತು ಕುಂಜತ್ತೂರು ಗಣೇಶ್, ಸಹ ಸಂಚಾಲಕರಾಗಿ ಚಂದ್ರಶೇಖರ ಭಟ್ ಕೊಂಕಣಾಜೆ ಮತ್ತು ಹರಿಶ್ಚಂದ್ರ ಮಾಡೂರು ಆಯ್ಕೆಯಾದರು.

ಡಾ. ಎಂ ಪ್ರಭಾಕರ ಜೋಶಿ, ಹರೀಶ್ ಬಳಂತಿಮೊಗರು, ಸುಬ್ರಹ್ಮಣ್ಯ ಬೈಪಡಿತ್ತಾಯ , ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ, ಸುಂದರ ಶೆಟ್ಟಿ ಬೆಟ್ಟಂಪಾಡಿ ಗೌರವ ಸಲಹೆಗಾರರಾಗಿ ಆಯ್ಕೆಯಾದರು.



