Fri. May 2nd, 2025

Mangaluru: ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಎಂಬ ಪೋಸ್ಟ್ ಬಹಿರಂಗ!

ಮಂಗಳೂರು (ಮೇ.2): ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್​ನ ಫಾಜಿಲ್ ಎಂಬಾತನ ಹತ್ಯೆ ಮಾಡಲಾಗಿತ್ತು. ಇದೇ ಸೇಡಿಗೆ ಈಗ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ. ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಅಂತ ಸೋಶಿಯಲ್​ ಮೀಡಿಯಾದಲ್ಲಿ ಅದೊಂದು ಪೋಸ್ಟ್ ವೈರಲ್​ ಆಗಿದ್ದು, ಸದ್ಯ ಸಾಕಷ್ಟು ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ⭕⭕ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹ*ತ್ಯೆ

ಮಾರ್ಚ್ 31ರಂದೇ ಸುಹಾಸ್ ಶೆಟ್ಟಿ ಹತ್ಯೆಗೆ ಮುಹೂರ್ತ ಫಿಕ್ಸ್ ಆಗಿತ್ತಾ ಎಂಬ ಅನುಮಾನಗಳು ಸದ್ಯ ಹುಟ್ಟಿಕೊಂಡಿವೆ. ಏಕೆಂದರೆ ಅಂದೇ ಟಾರ್ಗೆಟ್ ಕಿಲ್ಲರ್-03 ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಸುಹಾಸ್ ಶೆಟ್ಟಿ ಫೋಟೋ ಹಾಕಿ‌ ಶೀಘ್ರದಲ್ಲೇ ಸೇಡು ತೀರಿಸಿಕೊಳ್ಳುವುದಾಗಿ ಪ್ರಚೋದನಕಾರಿ ಪೋಸ್ಟ್ ಹಾಕಲಾಗಿತ್ತು.

‘ಫಿನೀಶ್’ ಅಂತ ಪೋಸ್ಟ್​​ ಬಹಿರಂಗ
ಇತ್ತ ಸುಹಾಸ್ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ Troll_mayadiaka ಹೆಸರಿನ ಇನ್‌ಸ್ಟಾಗ್ರಾಂ ಪೇಜ್​ನಲ್ಲಿ ‘ಫಿನೀಶ್’ ಅಂತ ಪೋಸ್ಟ್​​ ಬಹಿರಂಗವಾಗಿತ್ತು. ಮಂಗಳೂರಿನಿಂದಲೇ ಹಲವು ನಕಲಿ ಇನ್‌ಸ್ಟಾಗ್ರಾಂ ಪೇಜ್​​ಗಳನ್ನು ನಿಯಂತ್ರಣ ಮಾಡಲಾಗುತ್ತಿದೆ. ಹತ್ಯೆ ಬೆನ್ನಲ್ಲೇ ವಿಡಿಯೋ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಲಾಗಿದೆ. ಜೊತೆಗೆ ‘Waiting for next wicket’ ಅಂತ ಪೋಸ್ಟ್​ ಮಾಡಲಾಗಿದೆ.

ಕೊಲೆಯಾದ ಸುಹಾಸ್‌ ಶೆಟ್ಟಿ ಹಿಂದೂ ಕಾರ್ಯಕರ್ತನಾಗಿದ್ದ. ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ. ಸುಹಾಸ್ ಶೆಟ್ಟಿ ವಿರುದ್ಧ ಒಟ್ಟು 5 ಪ್ರಕರಣಗಳಿದ್ದವು. ಬಜಪೆ ಠಾಣೆಯಲ್ಲಿ 3, ಬೆಳ್ತಂಗಡಿ, ಸುರತ್ಕಲ್ ಠಾಣೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದು, ಇನ್ನೆರಡು ವಿಚಾರಣೆ ಹಂತದಲ್ಲಿದ್ದವು. ಮತ್ತು ಎರಡರಲ್ಲಿ ಖುಲಾಸೆಗೊಂಡಿದ್ದರು.

ಕೊಲೆ, ಕೊಲೆಗೆ ಯತ್ನ ಆರೋಪ ಹಿನ್ನಲೆ ಪೊಲೀಸರು ರೌಡಿಶೀಟ್ ಓಪನ್ ಮಾಡಿದ್ದರು. ಸುರತ್ಕಲ್​​ನಲ್ಲಿ ನಡೆದಿದ್ದ ಫಾಜಿಲ್ ಕೊಲೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ A1 ಆರೋಪಿಯಾಗಿದ್ದರು. ಮಾರ್ಚ್​​ನಲ್ಲಿ ಹೈಕೋರ್ಟ್​ನಿಂದ ಜಾಮೀನು ಪಡೆದು ಹೊರ ಬಂದಿದ್ದರು.

Leave a Reply

Your email address will not be published. Required fields are marked *