ಬೆಳ್ತಂಗಡಿ(ಮೇ.3)ಎಪ್ರಿಲ್. 21 ರಿಂದ ಎಪ್ರಿಲ್. 23 ರವರೆಗೆ ಮೈಸೂರು ಚಾಮುಂಡಿ ವಿಹಾರ ಸ್ಟೇಡಿಯಂ ನಲ್ಲಿ ಜರುಗಿದ 44 ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2025 ಇದರಲ್ಲಿ ಸರಕಾರಿ ಪ್ರೌಢ ಶಾಲೆ ಕಾಶಿಪಟ್ಣ ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯ. ಕೆ ಅವರು ಭಾಗವಹಿಸಿ ಹಲವು ವಿಭಾಗಗಳಲ್ಲಿ ಬಹುಮಾನಗಳನ್ನು ಗೆದ್ದುಕೊಂಡಿದ್ದಾರೆ.

ಪಂದ್ಯಾಕೂಟದ 40 ರಿಂದ 45 ವರ್ಷ ವಯೋಮಾನದವರ ಸ್ಪರ್ಧೆಯ 200ಮೀ ಹರ್ಡಲ್ಸ್ ಪ್ರಥಮ, ಉದ್ದಜಿಗಿತ ಪ್ರಥಮ, 400 ಮೀ ದ್ವಿತೀಯ, 200 ಮೀ ದ್ವಿತೀಯ,
4400 ರಿಲೇ ಪ್ರಥಮ, 4100 ರಿಲೇ ಪ್ರಥಮ, 4*100 ಮಿಕ್ಸೆಡ್ ರಿಲೇ ತೃತೀಯ ಸ್ಥಾನ ಪಡೆಯುವ ಮೂಲಕ ಅಪೂರ್ವ ಕ್ರೀಡಾ ಸಾಧನೆ ಮೆರೆದಿದ್ದಾರೆ. ಇವರ ಈ ಸ್ಪೂರ್ತಿದಾಯಕ ಕ್ರೀಡಾ ಭಾಗವಹಿಸುವಿಕೆ ಕ್ರೀಡಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಇವರು ಬಂಗಾಡಿ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್ ಲಕ್ಷ್ಮಣ ಗೌಡ ಅವರ ಪುತ್ರಿಯಾಗಿದ್ದಾರೆ.




