Mon. May 12th, 2025

Puttur: ಕೆಎಸ್ ಆರ್ ಟಿಸಿ ಬಸ್ & ಬೈಕ್ ನಡುವೆ ಭೀಕರ ಅಪಘಾತ – ತಂದೆ-ಮಗ ದಾರುಣ ಸಾವು

ಪುತ್ತೂರು:(ಮೇ.12) ಪುತ್ತೂರು–ಮಂಗಳೂರು ಹೆದ್ದಾರಿಯ ಕಬಕ ಕುವೆತ್ತಿಲ ಸಮೀಪ, ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಾವನ್ನಪ್ಪಿದ ಘಟನೆ ನಡೆದಿದೆ.

ಇದನ್ನೂ ಓದಿ: ⭕⭕”ಕಾಂತಾರ ಚಾಪ್ಟರ್ 1″ ಶೂಟ್ ಮುಗಿಸಿ ಬಂದಿದ್ದ ರಾಕೇಶ್ ಪೂಜಾರಿ

ಮೃತರನ್ನ ಬಂಟ್ವಾಳ ತಾಲೂಕಿನ ನರಿಕೊಂಬು ನಿವಾಸಿಗಳಾದ ಅರುಣ್ ಕುಲಾಲ್ ಹಾಗೂ ಅವರ ಮಗ ಧ್ಯಾನ್ ಎಂದು ಗುರುತಿಸಲಾಗಿದೆ.
ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಬಸ್, ಮಾಣಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.


ಈ ವೇಳೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರಿಬ್ಬರೂ ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದವರೆಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *