Tue. Jan 13th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Rakesh Poojary Death: “ಕಾಂತಾರ ಚಾಪ್ಟರ್ 1” ಶೂಟ್ ಮುಗಿಸಿ ಬಂದಿದ್ದ ರಾಕೇಶ್ ಪೂಜಾರಿ – ರಾತ್ರೋರಾತ್ರಿ ಹೃದಯಾಘಾತ

Kantara: Chapter 1: ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಆಪ್ತ ಗೆಳೆಯ ಗೋವಿಂದೇ ಗೌಡ (ಜಿಜಿ) ಅವರು ರಾಕೇಶ್ ಅವರ ಕೊನೆಯ ಕ್ಷಣಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಂತಾರ ಚಿತ್ರೀಕರಣದ ನಂತರ ಗೆಳೆಯನ ಮದುವೆಯಲ್ಲಿ ಭಾಗವಹಿಸಿದ್ದ ರಾಕೇಶ್, ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಜಿಜಿ ತಿಳಿಸಿದ್ದಾರೆ.

ಇದನ್ನೂ ಓದಿ: ⭕😔Rakesh Poojary: ಕಾಮಿಡಿ ಕಿಲಾಡಿ ಸೀಸನ್ 3 ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ

‘ಕಾಮಿಡಿ ಕಿಲಾಡಿಗಳು ಸೀಸನ್ 3’ ಖ್ಯಾತಿಯ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇದು ಅವರ ಆಪ್ತರಿಗೆ ಹಾಗೂ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನಾಗಿತ್ತು ಎಂಬುದನ್ನು ರಾಕೇಶ್ ಪೂಜಾರಿ ಅವರ ಆಪ್ತ ಬಳಗದಲ್ಲಿ ಒಬ್ಬರಾದ ನಟ ಗೋವಿಂದೇ ಗೌಡ (ಜಿಜಿ) ವಿವರಿಸಿದ್ದಾರೆ. ಮೇ 11ರ ಬೆಳಿಗ್ಗೆ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ರ ಶೂಟ್​ನಲ್ಲಿ ಅವರು ಇದ್ದರು. ಮಧ್ಯರಾತ್ರಿ ಅವರಿಗೆ ಸಾವು ಸಂಭವಿಸಿದೆ.

‘ಒಳ್ಳೆಯ ಕಲಾವಿದ ಎನ್ನುವುದಕ್ಕಿಂತ ಒಳ್ಳೆಯ ಮನುಷ್ಯನಾಗಿದ್ದ. ನನಗೂ ಆತ ತುಂಬಾನೇ ಆಪ್ತ. ಎಲ್ಲರ ಪ್ರೀತಿ ಪಾತ್ರ ವ್ಯಕ್ತಿ ಆಗಿದ್ದ. ಪ್ಲೇಟ್​ಲೆಟ್ಸ್ ಕಡಿಮೆ ಇತ್ತು. ಆ ಬಳಿ ಹಾರ್ಟ್​ ಅಟ್ಯಾಕ್ ಆಗಿದೆ. ವಿಷಯ ಕೇಳಿ ತುಂಬಾನೇ ನೋವಾಗುತ್ತಿದೆ. ಇದನ್ನು ನಂಬೋಕೆ ಆಗುತ್ತಿಲ್ಲ’ ಎಂದು ಭಾವುಕರಾಗಿ ಮಾತನಾಡಿದ್ದಾರೆ. ಅವರಿಗೆ ಈ ವಿಚಾರವನ್ನು ಅರಗಿಸಿಕೊಳ್ಳೋಕೆ ಸಾಧ್ಯವೇ ಆಗುತ್ತಿಲ್ಲ.

‘ಬೆಳಿಗ್ಗೆ ಕಾಂತಾರ ಸಿನಿಮಾ ಶೂಟ್​ನಲ್ಲಿ ಇದ್ದ. ಶೂಟ್ ಮುಗಿಸಿ ಸಂಜೆ ಗೆಳೆಯರ ಮದುವೆ ಫಂಕ್ಷನ್​ಗೆ ಹೋಗಿದ್ದಾನೆ. ಸುಸ್ತು ಎನ್ನುತ್ತಿದ್ದ. ಮಧ್ಯರಾತ್ರಿ ಹಾರ್ಟ್​ ಅಟ್ಯಾಕ್ ಆಯ್ತು. ಎಲ್ಲರೂ ನನಗೆ ಕಾಲ್ ಮಾಡಿದ್ದರು. ಆದರೆ ಮೊಬೈಲ್ ಸೈಲೆಂಟ್​ನಲ್ಲಿ ಇದ್ದಿದ್ದರಿಂದ ವಿಷಯ ಗೊತ್ತಾಗಿರಲಿಲ್ಲ. ಬೆಳಿಗ್ಗೆ ಎದ್ದು ನೋಡಿದಾಗ ವಿಷಯ ತಿಳಿಯಿತು’ ಎಂದಿದ್ದಾರೆ ಅವರು ಜಿಜಿ.

‘ಇತ್ತೀಚೆಗೆ ರಾಕೇಶ್​ಗೆ ಬೈಕ್ ಸ್ಕಿಡ್ ಆಗಿ ಅಪಘಾತ ಆಗಿತ್ತು. ಆದರೆ, ಬೇಗ ರಿಕವರಿ ಆದ. ಅದನ್ನು ಹೊರತುಪಡಿಸಿ ಅವನಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಆತ ತುಂಬಾನೇ ಆ್ಯಕ್ಟೀವ್ ಆಗಿದ್ದ. ಎಲ್ಲರಿಗೂ ಬೇಕಾಗಿದ್ದ ವ್ಯಕ್ತಿ. ತುಂಬಾನೇ ನೋವಾಗುತ್ತಿದೆ. ಮಾನವೀಯ ವ್ಯಕ್ತಿ. ಅದು ನನಗೆ ಅನುಭವಕ್ಕೆ ಬಂದಿತ್ತು. ನನ್ನ ಪಾಪು ಯಾರ ಜೊತೆಯೂ ಹೋಗುತ್ತಿರಲಿಲ್ಲ. ಆದರೆ, ಅವನ ಜೊತೆ ತುಂಬಾನೇ ಹೊತ್ತು ಆಟ ಆಡಿದ್ದ’ ಎಂದಿದ್ದಾರೆ ಜಿಜಿ.

Leave a Reply

Your email address will not be published. Required fields are marked *