Sat. May 24th, 2025

Belthangady: ಆಕಾಂಕ್ಷ ಆತ್ಮಹತ್ಯೆ ಪ್ರಕರಣ – ಮನೆಗೆ ತಲುಪಿದ ಮೃತದೇಹ

ಬೆಳ್ತಂಗಡಿ :(ಮೇ..21) ಪಂಜಾಬ್ ನಲ್ಲಿ ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ

ಉದ್ಯೋಗದಲ್ಲಿದ್ದ ಆಕಾಂಕ್ಷ ಎಸ್ ನಾಯರ್(22) ಪಂಜಾಬ್ ನಲ್ಲಿ ಕಾಲೇಜು ಕಟ್ಟಡದಿಂದ ಮೇ.17 ರಂದು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಆಕಾಂಕ್ಷ ಮೃತದೇಹ ಮೇ.21 ರಂದು ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ 9ಗಂಟೆ ಸುಮಾರಿಗೆ ಆಂಬುಲೆನ್ಸ್ ಮೂಲಕ ಧರ್ಮಸ್ಥಳದ ಬೊಳಿಯಾರ್ ಗೆ ತೆಗೆದುಕೊಂಡು ಬಂದಿದ್ದಾರೆ.

Leave a Reply

Your email address will not be published. Required fields are marked *