ಬೆಳಾಲು: (ಮೇ.26) ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಪತ್ರ ಮಂಡನೆ ಮತ್ತು ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಇದನ್ನೂ ಓದಿ: 🛑ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ
ಭಜನಾ ಮಂಡಳಿಯ 2025-26 ನೇ ಸಾಲಿನ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಪೋಸೊಟ್ಟು, ಕಾರ್ಯದರ್ಶಿಯಾಗಿ ತೇಜಸ್ ಗೌಡ ಶಾಂತಿನಗರ ಹಾಗೂ ಕೋಶಾಧಿಕಾರಿಯಾಗಿ ಹರೀಶ್ ಗೌಡ ಮುಂಡೆತ್ಯಾರು, ಉಪಾಧ್ಯಕ್ಷರಾಗಿ ಹರೀಶ್ ನಾಯ್ಕ ಕುದ್ದಂಟೆ, ಜತೆ ಕಾರ್ಯದರ್ಶಿಯಾಗಿ ಗಣೇಶ್ ಗೌಡ ಅನಂತೋಡಿ ಮತ್ತು ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಹರಿಪ್ರಸಾದ್ ಗೌಡ ಅರಣೆಮಾರು, ಸುಮಿತ್ ಆಚಾರ್ಯ ಅನಂತೋಡಿ, ವಿಘ್ನೇಶ್ ಗೌಡ ಅನಂತೋಡಿ, ಶಶಿಧರ ಪೂಜಾರಿ ಓಡಿಪ್ರೊಟ್ಟು, ಪ್ರವೀಣ್ ಗೌಡ ಆನಂತೋಡಿ ಹಾಗೂ ಸದಸ್ಯರನ್ನು ನೇಮಕ ಮಾಡಲಾಯಿತು.



ಈ ಸಭಾ ಕಾರ್ಯಕ್ರಮದಲ್ಲಿ ಶ್ರೀ ಅನಂತೇಶ್ವರ ಮಕ್ಕಳ ಕುಣಿತಾ ಭಜನಾ ತಂಡಕ್ಕೆ ತರಬೇತಿ ನೀಡುತ್ತಿರುವ ಗುರುಗಳಾದ ಶ್ರೀಮತಿ ಸೌಮ್ಯ ರಾವ್ ಇವರನ್ನು ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕರಾದ ನವೀನ್ ಗೌಡ ಕಂಬಳದಡ್ಡ ಇವರು ವಹಿಸಿದ್ದರು. ಭಜನಾ ಮಂಡಳಿಯ ಕಾರ್ಯದರ್ಶಿಯಾದ ವಿಘ್ನೇಶ್ ಗೌಡ ಅನಂತೋಡಿ ಇವರು ವಾರ್ಷಿಕ ಲೆಕ್ಕಾಚಾರ ಮಂಡನೆಯನ್ನು ಮಾಡಿದರು.

ವೇದಿಕೆಯಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಗೌಡ ಶ್ರೀ ಸೌಧ ಬೆಳಾಲು, ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಶ್ರೀ ದುರ್ಗಾಪ್ರಸಾದ್ ಕೆರ್ಮುಣ್ಣಾಯ, ಉಪಾಧ್ಯಕ್ಷರಾದ ಶ್ರೀಮತಿ ಮಮತಾ ದಿನೇಶ್ ಪೂಜಾರಿ ಉಪ್ಪಾರು, ಮಹಿಳಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಹೇಮಲತಾ ಶ್ರೀನಿವಾಸ ಗೌಡ ಗಣಪನಗುತ್ತು, ಮಹಿಳಾ ಸಮಿತಿಯ ಗೌರವಾಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ ಬೆಳಾಲು ಮತ್ತು ವ್ಯವಸ್ಥಾಪನಾ ಸಮಿತಿಯ ಜತೆ ಕಾರ್ಯದರ್ಶಿಯಾಗಿರುವ ಸತೀಶ್ ಗೌಡ ಎಳ್ಳುಗದ್ದೆ ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ದೇವಸ್ಥಾನದ ಕಛೇರಿ ಮೇಲ್ವಿಚಾರಕರಾದ ಶಿವಪ್ರಸಾದ್ ಗೊಲ್ಲ ಕಾರ್ಯಕ್ರಮ ನಿರೂಪಿಸಿದರು.

ಭಜನಾ ಮಂಡಳಿಯ ಸದಸ್ಯರಾದ ಹರೀಶ್ ನಾಯ್ಕ ಕುದ್ದಂಟೆ ಸ್ವಾಗತಿಸಿ, ಭಜನಾ ಮಂಡಳಿಯ ಗೌರವ ಸಲಹೆಗಾರರಾದ ಜಾರಪ್ಪ ಗೌಡ ಅರಣೆಮಾರು ವಂದಿಸಿದರು.
