Sat. May 31st, 2025

Kadaba: ಬೈಕ್‌ & ಕೆಎಸ್‌ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಮೃತ್ಯು

ಕಡಬ:(ಮೇ.೨೭) ಬೈಕ್‌ ಹಾಗೂ ಕೆ ಎಸ್‌ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ ನಡೆದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಹಳೇಸ್ಟೇಷನ್ ಸಮೀಪದ ಕೃಷ್ಣನಗರ ಎಂಬಲ್ಲಿ ನಡೆದಿದೆ.

ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ.

ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ಬಿಶ್ವಜಿತ್(23) ಮೃತ ಯುವಕ.

ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆ ಎಸ್‌ ಆರ್ ಟಿಸಿ ಬಸ್ ಹಾಗೂ ವಿಶ್ವಜಿತ್ ಚಲಾಯಿಸುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ.
ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಯುವಕ ಮೃತ ಹೊಂದಿದ್ದಾನೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *