Tue. Jan 13th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Mangaluru: ಅಬ್ದುಲ್ ರಹೀಮ್ ಹತ್ಯೆ ಪ್ರಕರಣ – ಕಾಂಗ್ರೆಸ್ ನಾಯಕರ ರಾಜೀನಾಮೆಗೆ ಮುಸ್ಲಿಂ ಮುಖಂಡರ ಆಗ್ರಹ

ಮಂಗಳೂರು(ಮೇ 28): ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹೀಮ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸರ್ಕಾರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಜಿಲ್ಲೆಗೆ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ⭕⭕Sridhar Nayak : ಶ್ರೀಧರ್ ಬಗ್ಗೆ ಶಾಕಿಂಗ್ ವಿಚಾರ ಬಿಚ್ಚಿಟ್ಟ ಪತ್ನಿ!?

ಇನ್ನು, ಪ್ರಕರಣ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೊಹಮ್ಮದ್ ನಿಸಾ‌ರ್ ಎಂಬುವರು ನೀಡಿದ ದೂರು ಆಧರಿಸಿ, ಅಬ್ದುಲ್ ರಹೀಮ್ ಗೆ ಪರಿಚಯಸ್ಥರೇ ಆಗಿರುವ ದೀಪಕ್ ಮತ್ತು ಸುಮಿತ್ ಸೇರಿದಂತೆ 15 ಜನರ ವಿರುದ್ಧ ಬಿಎನ್​ಎಸ್​ ಕಾಯ್ದೆ 103, 109, 118(1), 118(2), 190, 191(1), 191(2), 191(3)ರ ಅಡಿ ಎಫ್​ಐಆರ್​ ದಾಖಲಾಗಿದೆ.

“ಅಬ್ದುಲ್ ರಹೀಮ್ ಮತ್ತು ನಾನು (ಕಲಂದರ್ ಶಾಫಿ) ಪಿಕಪ್ ವಾಹನದಲ್ಲಿನ ಮರಳನ್ನು ಅನ್​ ಲೋಡ್ ಮಾಡಲು ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆಗೆ ಹೋಗಿದ್ದೇವು. ಈ ವೇಳೆ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ದಾಳಿ ಮಾಡಿದ್ದಾರೆ. ಚಾಲಕನ ಸೀಟಿನಲ್ಲಿ ಕುಳಿತಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು, ಅವರ ಮೇಲೆ ತಲವಾರು, ಚೂರಿ, ರಾಡ್​ಗಳಿಂದ ಹಲ್ಲೆ ಮಾಡಿದರು. ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾದರು” ಎಂದು ಹಲ್ಲೆಗೊಳಗಾದ ಕಲಂದ‌ರ್ ಶಾಫಿ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಆಧರಿಸಿ ಮೊಹಮ್ಮದ್ ನಿಸಾ‌ರ್ ಎಂಬವರು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಸಿದ್ದಾರೆ.

15 ಮಂದಿ ವ್ಯವಸ್ಥಿತವಾಗಿ ಹತ್ಯೆ ಮಾಡಿದ್ದಾರೆ: ಎಸ್​ಡಿಪಿಐ ಜಿಲ್ಲಾಧ್ಯಕ್ಷ
ಕೊಲ್ತಮಜಲು ಬಳಿ ಪಿಕಪ್ ಚಾಲಕನಾಗಿದ್ದ ಮುಸ್ಲಿಂ ಯುವಕನಿಗೆ ಮರಳು ಲೋಡ್​ಗೆ ಕರೆದಿದ್ದರು. ಸಂಘ ಪರಿವಾರಕ್ಕೆ ಸೇರಿದ ಗೂಂಡಾ ಪಡೆ ಏಕಾಏಕಿ ತಲವಾರಿನಿಂದ ದಾಳಿ ನಡೆಸಿದೆ. ಇಮ್ತಿಯಾಜ್ ಆಲಿಯಾಸ್ ಅಬ್ದುಲ್ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಲ ದಿನಗಳಿಂದ ಕೆಲ ಕಿಡಿಗೇಡಿಗಳು ಮುಸ್ಲಿಮರಿಗೆ ಬಹಿರಂಗ ಬೆದರಿಕೆ ಹಾಕುತ್ತಿದ್ದಾರೆ. ರೌಡಿಶೀಟರ್ ಒಬ್ಬನ ಹತ್ಯೆಗೆ ಪ್ರತೀಕಾರವಾಗಿ ಬೆದರಿಕೆ ಹಾಕುತ್ತಿದ್ದಾರೆ. ಮೊನ್ನೆ ಪ್ರತಿಭಟನೆಯಲ್ಲಿ ಶ್ರೀಕಾಂತ್ ಶೆಟ್ಟಿ ಎಂಬಾತ ರಕ್ತಕ್ಕೆ ರಕ್ತ ಅಂತ ಹೇಳಿದ್ದಾನೆ. ಮತ್ತೊಬ್ಬ ಭರತ್ ಕುಮ್ಡೇಲ್ ಎಂಬ ಗೂಂಡಾ ಪೋಸ್ಟ್​ಮಾರ್ಟ್ಂ ಕೂಡ ಮಾಡಲು ಆಗದ ರೀತಿಯಲ್ಲಿ ಕೊಲೆ ಮಾಡುತ್ತೇನೆ ಎಂದಿದ್ದಾನೆ ಎಂದು ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಆಕ್ರೋಶ ವ್ಯಕ್ತಪಡಿಸಿದರು.

ಅಬ್ದುಲ್​‌ ರಹೀಮ್ ​ ಹತ್ಯೆಗೆ ಗುಂಡೂರಾವ್​ ಖಂಡನೆ
ಮಂಗಳೂರಿನ ಬಂಟ್ವಾಳದ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ DG &IGP ಹಾಗೂ ಕಾನೂನು ಸುವ್ಯವಸ್ಥೆ ADGP ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು, ಸೂಕ್ತ ಬಿಗಿ ಕಾನೂನು ಕ್ರಮಗಳನ್ನ ಜರುಗಿಸುವಂತೆ ಸೂಚನೆ ನೀಡಿದರು. ಅಲ್ಲದೇ ಮಂಗಳೂರು ಜಿಲ್ಲಾಧಿಕಾರಿ ಹಾಗೂ ಎಸ್.ಪಿ ಅವರೊಂದಿಗೆ ಮಾತನಾಡಿದ ಸಚಿವರು ಮಂಗಳೂರಿನಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Leave a Reply

Your email address will not be published. Required fields are marked *