Sun. Jun 1st, 2025

Bantwal: ಅಬ್ದುಲ್ ರಹೀಂ ಹತ್ಯೆ ಪ್ರಕರಣ – ಭರತ್ ಕುಮ್ಡೇಲ್‌ನನ್ನು ಬಂಧಿಸದಿದ್ದರೆ “ಎಸ್ಪಿ ಕಚೇರಿ ಚಲೋ” ಎಸ್‌ಡಿಪಿಐ ಎಚ್ಚರಿಕೆ

ಮಂಗಳೂರು:(ಮೇ.29) ಪಿಕಪ್ ವಾಹನದ ಚಾಲಕ ಅಬ್ದುಲ್ ರಹೀಂ ಹತ್ಯೆ ಸೂತ್ರಧಾರ ಭರತ್ ಕುಮ್ಡೇಲ್‌ನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ 24 ಗಂಟೆಯ ಒಳಗಡೆ ಬಂಧಿಸಬೇಕು. ಇಲ್ಲದಿದ್ದರೆ ಎಸ್ಪಿ ಕಚೇರಿ ಚಲೋ ಸಹಿತ ದ.ಕ. ಜಿಲ್ಲಾದ್ಯಂತ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದೆಂದು ಎಸ್‌ಡಿಪಿಐ ದ.ಕ. ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಂಟ್ವಾಳ ಪುರಸಭೆಯ ಉಪಾಧ್ಯಕ್ಷ ಮೂನಿಷ್ ಅಲಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 🛑ಬೆಳ್ತಂಗಡಿ: ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ಮನವಿ ಸಲ್ಲಿಕೆ

ಗ್ಯಾಂಗ್‌ವಾರ್‌ನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಹತ್ಯೆಯ ನಂತರ ಜಿಲ್ಲೆಯ ಹಲವು ಭಾಗಗಳಲ್ಲಿ ಮುಸ್ಲಿಂ ಯುವಕರ ಹತ್ಯಾಯತ್ನ ನಡೆದಿತ್ತು. ಅಲ್ಲದೆ ಸಂಘಪರಿವಾರದ ನಾಯಕರಾದ ಭರತ್ ಕುಮ್ಡೇಲ್, ಶ್ರೀಕಾಂತ್ ಶೆಟ್ಟಿ, ಶಿವಾನಂದ ಮೆಂಡನ್ ಸಹಿತ ಹಲವು ಸಂಘ ಪರಿವಾರದ ನಾಯಕರು ಹತ್ಯೆಗೆ ಪ್ರತೀಕಾರ ನಡೆಸುತ್ತೇವೆ ಎಂದು ಬಹಿರಂಗವಾಗಿ ಭಾಷಣಗೈದು ಮುಸ್ಲಿಂ ಯುವಕರ ಹತ್ಯೆಯ ಬಗ್ಗೆ ಮುನ್ನೆಚ್ಚರಿಕೆ ನೀಡಿದ್ದರೂ ಕೂಡ ಪೋಲಿಸ್ ಇಲಾಖೆ ಹಾಗೂ ಸರಕಾರ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಿಲ್ಲ.

ಅದರ ಪರಿಣಾಮ ಕೊಳ್ತಮಜಲುವಿನಲ್ಲಿ ಅಬ್ದುಲ್ ರಹೀಂನ ಹತ್ಯೆಯಾಗಿದೆ. ಈ ಕೊಲೆಯಲ್ಲಿ ಭರತ್ ಕುಮ್ಡೇಲ್‌ನ ಕೈವಾಡ ಇರುವುದು ಪೊಲೀಸ್ ಇಲಾಖೆಗೆ ತಿಳಿದಿದ್ದರೂ ಕೂಡ ಈ ತನಕ ಈತನ ಮೇಲೆ ಕ್ರಮವಾಗಿಲ್ಲ. ಗುರುವಾರ ಸಂಜೆಯೊಳಗೆ ಈತನ ವಿರುದ್ಧ ಕಾನೂನು ಕ್ರಮ ಜರುಗಿಸದಿದ್ದರೆ ಎಸ್ಪಿ ಕಚೇರಿ ಚಲೋ ನಡೆಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *