ಮಂಗಳೂರು:(ಮೇ.30) ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ⭕ವಿಟ್ಲ: ಲಾರಿಗೆ ಡಿಕ್ಕಿ ಹೊಡೆದ ಬೈಕ್
ಸುಧೀರ್ ಕುಮಾರ್ ರೆಡ್ಡಿ ಇದುವರೆಗೂ ಬೇಹುಗಾರಿಕಾ ಇಲಾಖೆಯ ಡಿ ಐ ಜಿ ಆಗಿದ್ದರು. ಅವರು ವರ್ಗಾವಣೆಯಾಗಿರುವ ಅನುಪಮ್ ಅಗರ್ವಾಲ್ ಅವರ ಸ್ಥಾನಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.

ಉಡುಪಿ ಎಸ್ಪಿಯಾದ್ದ ಡಾ.ಅರುಣ್ ಕೆ. ಅವರು ವರ್ಗಾವಣೆಯಾಗಿರುವ ಯತೀಶ್ ಎನ್. ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.



