Sat. May 31st, 2025

Vitla : ಲಾರಿಗೆ ಡಿಕ್ಕಿ ಹೊಡೆದ ಬೈಕ್‌ – ಬೈಕ್ ಸವಾರ ಮೃತ್ಯು

ವಿಟ್ಲ:(ಮೇ.30) ರಸ್ತೆಯಲ್ಲಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: ⭕ಮಂಗಳೂರು: ಭಾರೀ ಮಳೆಗೆ ಮನೆಯ ತಡೆಗೋಡೆ ಕುಸಿತ

ಮೃತರನ್ನು ಒಕ್ಕೆತ್ತೂರು ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಇರ್ಫಾನ್ (19) ಎಂದು ಗುರುತಿಸಲಾಗಿದೆ. ಸಹಸವಾರ ಫಾರಿಸ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಫಾರಿಸ್ ಬೈಕಿನಲ್ಲಿ ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕನ್ಯಾನ ಕಡೆಯಿಂದ ಬಾಕ್ಸೈಟ್ ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಅದರ ಚಾಲಕ ರಸ್ತೆಯಲ್ಲೇ ನಿಲ್ಲಿಸಿದ್ದಾನೆ ಎನ್ನಲಾಗಿದ್ದು, ಇದನ್ನು ಗಮನಿಸದೆ ಬೈಕ್ ಅದಕ್ಕೆ ಡಿಕ್ಕಿ ಹೊಡೆದಿದ್ದು, ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬೈಕ್ ಸವಾರರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಇರ್ಫಾನ್(19) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *