ಕಾರ್ಕಳ:(ಮೇ.31) ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿ ಎಂಬಲ್ಲಿ ಹಟ್ಟಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಎರಡು ಕಂಬಳ ಕೋಣಗಳು ಸಾವನ್ನಪ್ಪಿದೆ.

ಇದನ್ನೂ ಓದಿ: ⭕ಬಂಟ್ವಾಳ: ಅಬ್ದುಲ್ ರಹೀಂ ಕೊಲೆ ಪ್ರಕರಣ
ಬೇಲಾಡಿ ಬಾವ ಅಶೋಕ್ ಶೆಟ್ಟಿ ಅವರಿಗೆ ಸೇರಿದ ಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಮೇ 31 (ಇಂದು) ಮುಂಜಾನೆ ಕೆಲಸದಾಳು ಬಂದು ನೋಡಿದಾಗ ಈ ಘಟನೆ ತಿಳಿದು ಬಂದಿದೆ.
ಅಪ್ಪು ಮತ್ತು ತೋನ್ಸೆ ಎಂಬ ಕೋಣಗಳು ಸಾವಿಗೀಡಾಗಿದೆ. ಈ ಕೋಣಗಳು ಹಲವು ಕಂಬಳ ಕೂಟಗಳಲ್ಲಿ ಬಹುಮಾನ ಪಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.




