Wed. Jun 4th, 2025

Dharmasthala: ಶ್ರೀ.ಧ.ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ “ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ಎಂಬ ಘೋಷ ವಾಕ್ಯದೊಂದಿಗೆ ಪ್ರಾರಂಭೋತ್ಸವ

ಧರ್ಮಸ್ಥಳ: (ಜೂ.02) ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ಎಂಬ ಘೋಷ ವಾಕ್ಯದೊಂದಿಗೆ 2025-26ನೇ ಸಾಲಿನ ಪ್ರಾರಂಭೋತ್ಸವವನ್ನು ಇಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಇದನ್ನೂ ಓದಿ; 🟣ಉಜಿರೆ: ಮಹಾವೀರ ಜೈನ್ ಅವರಿಗೆ ಪಿ.ಹೆಚ್.ಡಿ ಪದವಿ


ಕ್ಷೇತ್ರದ ಮಣೆಗಾರರಾದ ಶ್ರೀ ವಸಂತ ಭಟ್ ಇವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ 2025 26 ನೇ ಸಾಲಿನ ಶೈಕ್ಷಣಿಕ ವರ್ಷವೂ ಎಲ್ಲರಿಗೂ ಒಳ್ಳೆಯದನ್ನೇ ಮಾಡಲಿ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಆಶೀರ್ವಾದ ಮಾಡಿದರು.


ಹೊಸದಾಗಿ ಸೇರಿದ ಮಕ್ಕಳನ್ನು ಪನ್ನೀರು ಹಾಕಿ ಆರತಿ ಮಾಡಿ ಸ್ವಾಗತಿಸಲಾಯಿತು. ಹಾಗೂ ಸ್ಲೇಟು ,ಬಳಪ ,ಪುಸ್ತಕಗಳನ್ನು ನೀಡಿ ಆತ್ಮೀಯವಾಗಿ ಶಾಲೆಗೆ ಶಿಕ್ಷಕರು ಬರಮಾಡಿಕೊಂಡರು.


ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ್ ರಜಪೂತ್ ಹಿರಿಯ ಶಿಕ್ಷಕರಾದ ಶ್ರೀ ಜೋಸೆಫ್, ಶ್ರೀಮತಿ ಶ್ರೀಜಾ ಹಾಗೂ ಪೋಷಕರಾದ ಶ್ರೀ ಸುರೇಶ್ ಅವರು ಉಪಸ್ಥಿತರಿದ್ದರು.


ಶ್ರೀ ಜೋಸೆಫ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ನಿಯರು ಪ್ರಾರ್ಥಿಸಿದರು.
ಶ್ರೀಮತಿ ಪೂರ್ಣಿಮಾ ಕೆ ಎಂ ನಿರೂಪಿಸಿದ ಕಾರ್ಯಕ್ರಮವನ್ನು ಶ್ರೀಮತಿ ಶ್ರೀಜಾ ಸ್ವಾಗತಿಸಿ ಶ್ರೀಮತಿ ಉಷಾ ವಂದನಾರ್ಪಣೆಗೈದರು. ಎಲ್ಲಾ ಶಿಕ್ಷಕರು ಸಹಕರಿಸಿದರು.

Leave a Reply

Your email address will not be published. Required fields are marked *