ಉಜಿರೆ:(ಜೂ.2) ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಹಾವೀರ ಜೈನ್ ಇಚ್ಲಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.

ಇದನ್ನೂ ಓದಿ: ☘ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ಉಜಿರೆಯ ಡಾ. ಹಾಮಾನಾ ಸಂಶೋಧನಾ ಕೇಂದ್ರದ ಮೂಲಕ ಡಾ.ಬಿ.ಪಿ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ ‘ ಕನ್ನಡ ಜೈನ ಸಾಹಿತ್ಯದಲ್ಲಿ ಕರ್ಮಸಿದ್ಧಾಂತದ ಸ್ವರೂಪ’ ‘ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯವು ಪಿ.ಹೆಚ್.ಡಿ ಪದವಿಯನ್ನು ನೀಡಿದೆ.


ಇವರು ಧಾರ್ಮಿಕ ಉಪನ್ಯಾಸಕರು , ಅನೇಕ ಶಾಸ್ತ್ರದಾನ ಪುಸ್ತಕಗಳ ಸಂಪಾದಕರು , ಚಾವಡಿ ಚರ್ಚೆ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ನೆಲ್ಯಾಡಿ ಜೇಸಿಐ ಇದರ ಪೂರ್ವಾಧ್ಯಕ್ಷರು ಹಾಗೂ ಭಾರತೀಯ ಜೈನ್ ಮಿಲನ್ ಇದರ ಇಚ್ಲಂಪಾಡಿ ಶಾಖೆಯ ಪೂರ್ವಾಧ್ಯಕ್ಷರು ಕೂಡ ಆಗಿದ್ದಾರೆ.
ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು , ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ. ಎಸ್ ಹಾಗೂ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್. ಬಿ ಯವರು ಅಭಿನಂದಿಸಿದರು.


