ಇಳಂತಿಲ :(ಜೂ. 03) ಇಳಂತಿಲ ಗ್ರಾಮದ ಹಾರಕೆರೆ ಎಂಬಲ್ಲಿ ವಿಪರೀತ ಮಳೆಗೆ ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿದು ಮುಖ್ಯರಸ್ತೆ ವಾಹನ ಸಂಚಾರಕ್ಕೆ ರಸ್ತೆ ಸಂಪೂರ್ಣವಾಗಿ ಬಂದ್ ಆಗಿತ್ತು.

ಇದನ್ನೂ ಓದಿ: 😱ಪುತ್ತೂರು: ಅಪ್ಪನ ನೋಡಲು ಬಂದ ಮಗಳಿಗೆ ಕಾದಿತ್ತು ಶಾಕ್..!
ಇಳಂತಿಲ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ತಿಮ್ಮಪ್ಪ ಗೌಡರವರು ಸ್ಥಳಕ್ಕೆ ಭೇಟಿ ನೀಡಿ ಹಿಟಾಚಿ ಮೂಲಕ ಸ್ಥಳದಲ್ಲಿದ್ದ ಮಣ್ಣು ತೆರವು ಕಾರ್ಯ ಹಾಗೂ ಆ ಸ್ಥಳದ ಡಾಮಾರು ರಸ್ತೆಯಲ್ಲಿ ಕೆಸರಿದ್ದ ಕಾರಣ ದ್ವಿಚಕ್ರ, ತ್ರಿಚಕ್ರ ವಾಹನಕ್ಕೆ ಅಡಚಣೆ ಉಂಟಾಗಿತ್ತು ಇದನ್ನು ಗಮನಿಸಿ ಟ್ಯಾಂಕರ್ ನಲ್ಲಿ ನೀರು ಹಾಯಿಸಿ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.



ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಹಕರಿಸಿದರು. ಈ ಕಾರ್ಯಕ್ಕೆ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ವಿಪರ್ಯಾಸ ಎಂದರೆ ಹಾನಿ ಸಂಭವಿಸಿದ ಸ್ಥಳಕ್ಕೆ ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಥವಾ ಸದಸ್ಯರಾಗಲಿ ಭೇಟಿ ನೀಡದೆ ಇರುವುದು ನಾಗರಿಕರ ಕೆಂಗಣ್ಣಿಗೆ ಗುರಿಯಾಗಿದೆ.

