Fri. Jun 6th, 2025

Rishab Shetty: ಕಾಮಿಡಿ‌ ಕಿಲಾಡಿ ರಾಕೇಶ್ ಮನೆಗೆ ರಿಷಬ್‌ ಶೆಟ್ಟಿ ದಂಪತಿ ಭೇಟಿ!!

ಉಡುಪಿ:(ಜೂ.3) ಕಳೆದ ತಿಂಗಳು ಹೃದಯಾಘಾತದಿಂದ ಮೃತಪಟ್ಟ ಕಾಮಿಡಿ ಕಿಲಾಡಿಯ ಮೂಲಕ ಜನಮನ್ನಣೆ ಗಳಿಸಿದ್ದ ರಾಕೇಶ್ ಪೂಜಾರಿ, ಮನೆಗೆ ರಿಷಬ್ ಶೆಟ್ಟಿ ಅವರ ಪತ್ನಿ ಭೇಟಿ‌ ನೀಡಿ ಸಾಂತ್ವನ ಹೇಳಿದರು.

ರಾಕೇಶ್ ಪೂಜಾರಿ ಕಿರುತೆರೆ ಮಾತ್ರವಲ್ಲ ಕನ್ನಡ ಸಿನಿರಂಗದಲ್ಲೂ ಕೂಡ ಒಂದಿಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದರು. ಅದ್ರಲ್ಲೂ ಪ್ರೇಕ್ಷಕರು ಕಾತುರದಿಂದ ಕಾದಿರುವ ಕಾಂತಾರ ಚಾಪ್ಟ‌ರ್ 1ರಲ್ಲಿ ಕೂಡ ರಾಕೇಶ್ ಒಂದು ಮಹತ್ವದ ಪಾತ್ರವನ್ನು ನಿಭಾಯಿಸಿದ್ದಾರೆ. ರಾಕೇಶ್ ಅವರ ಕೊನೆಯ ಸಿನಿಮಾ ಕಾಂತಾರ ಅಂತ ಹೇಳಿದ್ರು ತಪ್ಪಾಗಲ್ಲ.

ಕಾಂತಾರ ಸಿನಿಮಾಗಾಗಿ ಸಾಕಷ್ಟು ಸಿನಿಮಾಗಳನ್ನು ರಾಕೇಶ್ ಕೈಬಿಟ್ಟಿದ್ದರು. ಆದ್ರೆ ಅವರ ಅಂತಿಮ ದರ್ಶನಕ್ಕೆ ರಿಷಬ್ ಶೆಟ್ಟಿ ಬಂದಿಲ್ಲ ಎಂಬ ವಿಚಾರ ತುಂಬಾನೇ ಪ್ರಚಾರ ಮಾಡಿತ್ತು ಮತ್ತು ಎಲ್ಲೆಡೆ ಚರ್ಚೆ ಕೂಡ ಆಗಿತ್ತು, ಒಂದಿಷ್ಟು ಜನ ರಿಷಬ್ ಅವರ ಈ ನಡೆಗೆ ಬೇಸರವನ್ನು ಕೂಡ ವ್ಯಕ್ತ ಪಡಿಸಿದ್ದರು.

Leave a Reply

Your email address will not be published. Required fields are marked *