Fri. Jun 6th, 2025

Dharmasthala: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ:(ಜೂ.05): ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆಯನ್ನು ನೀಡಲಾಯಿತು.

ಇದನ್ನೂ ಓದಿ: 🟣ಉಜಿರೆ: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ​


ನಂತರ ಸಭಾ ಕಾರ್ಯಕ್ರಮವು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ರತ್ನಮಾನಸ ಉಜಿರೆ ಇದರ ನಿಲಯ ಪಾಲಕರಾದ ಶ್ರೀ ಯತೀಶ್ ಕೆ. ಬಳೆಂಜ ಇವರು ಮಾತನಾಡಿ ಮನುಷ್ಯರು ಪರಿಸರವನ್ನು ಕಲುಷಿತ ಮಾಡಿ ಪರಿಸರ ಮಾಲಿನ್ಯವನ್ನು ಮಾಡುತ್ತಿದ್ದಾರೆ. ಪ್ರಜ್ಞಾವಂತ ನಾಗರೀಕರಾದ ನಾವು ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಆಗ ನಮಗೆ ಸ್ವಚ್ಚ ನೀರು, ಗಾಳಿ, ಆಹಾರ ಸಿಗುತ್ತದೆ. ವಿದ್ಯಾವಂತರಾದ ವಿದ್ಯಾರ್ಥಿಗಳು ಪರಿಸರವನ್ನು ಉಳಿಸಿ ಬೆಳಸಿ ಸಸ್ಯಶ್ಯಾಮಲೆಯಾಗಿ ಭಾರತಾಂಬೆಯು ಕಂಗೊಳಿಸುವಂತೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.


ನಂತರ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಕಮಲ್ ತೇಜು ರಜಪೂತ್, ಸ್ಥಳೀಯ ಗ್ರಾಮ ಪಂಚಾಯತ್ ನ ಗ್ರಂಥಾಲಯ ಪಾಲಕಿಯಾದ ಶ್ರೀಮತಿ ಮಂಜುಳಾ, ಹಿರಿಯ ಶಿಕ್ಷಕಿ ಶ್ರೀಜಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕಿ ಸೀಮಾ ಎಸ್ ಎಮ್ ಕಾರ್ಯಕ್ರಮ ನಿರ್ವಹಿಸಿದರು. ಶ್ರೀಜಾ ಸ್ವಾಗತಿಸಿ, ಶಿಕ್ಷಕಿ ಸುಮಾ ವಂದಿಸಿದರು.

Leave a Reply

Your email address will not be published. Required fields are marked *