ತೀರ್ಥಹಳ್ಳಿ:(ಜೂ.12) ಕಾಂತಾರ ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ.

ಇದನ್ನೂ ಓದಿ: 🟣ಬಳಂಜ: ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ
ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಕಾಂತಾರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು.


ಅವರಿಗೆ ನಿನ್ನೆ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತ ದೇಹ ಇರಿಸಲಾಗಿದೆ. ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.


