Ahmedabad Plane Crash: ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಗುರುವಾರ (ಜೂನ್ 12) ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿ ನಗರ ಪ್ರದೇಶದಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಈ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: 🟣ಬೆಳ್ತಂಗಡಿ:(ಜೂ.16 -21) ಗಣೇಶ್ ವೈದ್ಯಕೀಯ ಮತ್ತು ಅಪಘಾತ ಚಿಕಿತ್ಸಾ ಕೇಂದ್ರ
ಇನ್ನು ಈ ದುರಂತದಲ್ಲಿ ಬನ್ಸ್ವಾರಾ ಜಿಲ್ಲೆಗೆ ಸಂಬಂಧಿಸಿದ ಮತ್ತೊಂದು ದುರಂತ ಘಟನೆ ಬೆಳಕಿಗೆ ಬಂದಿದೆ. ಈ ಅಪಘಾತದಲ್ಲಿ, ಬನ್ಸ್ವಾರಾ ನಿವಾಸಿ ಪ್ರತೀಕ್ ಜೋಶಿ ತಮ್ಮ ಇಡೀ ಕುಟುಂಬದೊಂದಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಪ್ರತೀಕ್ ಜೋಶಿ ಸುಮಾರು ಆರು ವರ್ಷಗಳ ಹಿಂದೆ ಲಂಡನ್ಗೆ ಸ್ಥಳಾಂತರಗೊಂಡಿದ್ದರು. ಇತ್ತೀಚೆಗೆ ತಮ್ಮ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ಅಲ್ಲಿ ನೆಲೆಸಲು ಪ್ಲಾನ್ ಮಾಡಿದ್ದರಂತೆ.
ಕೆಲಸಕ್ಕೆ ರಾಜೀನಾಮೆ ನೀಡಿ ಲಂಡನ್ಗೆ ಹೊರಟ ವೈದ್ಯೆ:
ಪ್ರತೀಕ್ ಜೋಶಿ ಅವರ ಪತ್ನಿಯ ಹೆಸರು ಡಾ. ಕೋಮಿ ವ್ಯಾಸ್. ಅವರು ವೈದ್ಯರಾಗಿದ್ದರು ಮತ್ತು ಲಂಡನ್ನಲ್ಲಿ ಹೊಸದಾಗಿ ಜೀವನ ಆರಂಭಿಸಲು ಎರಡು ದಿನಗಳ ಹಿಂದೆ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ಕುಟುಂಬಕ್ಕೆ ಇಬ್ಬರು ಅವಳಿ ಹೆಣ್ಣುಮಕ್ಕಳು ಸೇರಿದಂತೆ ಮೂವರು ಮಕ್ಕಳಿದ್ದರು. ಇದೀಗ ವಿಮಾನ ಪತನದಿಂದಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.




