ಉಜಿರೆ :(ಜೂ.14) ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆಯು ಅತ್ಯಂತ ಶ್ರದ್ದಾಭಕ್ತಿಯಿಂದ ನಡೆಯಿತು. ಬಲಿಪೂಜೆಯ ನೇತೃತ್ವವನ್ನು ಹೋಲಿ ರೆಡಿಮರ್ ಶಾಲೆಯ ಪ್ರಾಂಶುಪಾಲರಾದ ಫಾ! ಕ್ಲಿಪರ್ಡ್ ಪಿಂಟೊ ರವರು ವಹಿಸಿದ್ದರು.

ಇದನ್ನೂ ಓದಿ: 🟣ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ
ಅವರು ತಮ್ಮ ಪ್ರಭೋಧನೆಯಲ್ಲಿ ಸಂತ ಅಂತೋಣಿಯವರ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬ ನೈತಿಕ ಉಪದೇಶವನ್ನು ನೀಡಿದರು. ಬಲಿಪೂಜೆಯಲ್ಲಿ ಸಂಚಾಲಕರಾದ ಫಾ! ಅಬೆಲ್ ಲೋಬೊ, ಪ್ರಾಂಶುಪಾಲರಾದ ಫಾ!ವಿಜಯ್ ಲೋಬೊ ಹಾಗೂ ದಯಾಳ್ ಬಾಗ್ನ ಫಾ! ದೀಪಕ್ ಫೆರ್ನಾಂಡಿಸ್ ಸಹಕರಿಸಿದರು.


https://www.facebook.com/share/v/1JMdZ7iHGL
ಕಾರ್ಯಕ್ರಮದಲ್ಲಿ ಪಾಲನಾ ಮಂಡಳಿ ಉಪಾಧ್ಯಕ್ಷರಾದ ಶ್ರೀ ಆಂಟನಿ ಫೆರ್ನಾಂಡಿಸ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ತದನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಿಶೆಲ್ ಪಿಂಟೋ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.


