Mon. Jun 16th, 2025

Ujire: ಎಸ್.ಡಿ.ಎಂ. ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ

ಉಜಿರೆ :(ಜೂ.16) ಉಜಿರೆ ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪುನಃಶ್ಚೇತನ ತರಬೇತಿ ಕಾರ್ಯಾಗಾರ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು.

ಇದನ್ನೂ ಓದಿ: 🌈ವೇಣೂರು: ವೇಣೂರು ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ “SPECTRUM 2K25 – ಫ್ರೆಶರ್ಸ್ ಡೇ” ಕಾರ್ಯಕ್ರಮ

ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಡಿ ಎಂ ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪರಾದ  ಡಾ. ಲಕ್ಷ್ಮೀನಾರಾಯಣರವರು ಎನ್ ಎಸ್ ಎಸ್ ನ ಧ್ಯೇಯ,ಉದ್ದೇಶ ಕಾರ್ಯಕ್ರಮ ಮುಂತಾದ ವಿಷಯಗಳ ಕುರಿತು ತಿಳಿಸಿಕೊಟ್ಟರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ.ರವರು  ” ಎನ್ಎಸ್ಎಸ್ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಒಂದು ಅವಕಾಶವಾಗಿದ್ದು, ಸ್ವಯಂ ಸೇವಕರಾಗಿ  ಇಲ್ಲಿ ತಮ್ಮನ್ನು ಸರಿಯಾಗಿ  ತೊಡಗಿಸಿಕೊಂಡಾಗ ನಿಜವಾದ ವ್ಯಕ್ತಿತ್ವ ಮೂಡಿಸಿಕೊಳ್ಳಲು ಸಾಧ್ಯ “ಎಂದು ಹೇಳಿದರು.

       ವೇದಿಕೆಯಲ್ಲಿ ಎನ್ಎಸ್ಎಸ್ ನಿಕಟಪೂರ್ವ ಯೋಜನಾಧಿಕಾರಿಗಳಾದ ಡಾ. ಪ್ರಸನ್ನ ಕುಮಾರ್ ಐತಾಳ್, ಯೋಜನಾಧಿಕಾರಿಗಳಾದ ವಿಶ್ವನಾಥ್  ಎಸ್., ಸಹಯೋಜನಾಧಿಕಾರಿ ಶೋಭಾ ಪಿ  ಉಪಸ್ಥಿತರಿದ್ದರು. 

      ಸ್ವಯಂ ಸೇವಕಿ  ಮೌಲ್ಯ ಅತಿಥಿಗಳ ಪರಿಚಯಿಸಿದರು. ಸ್ವಯಂ ಸೇವಕರಾದ  ಸಂತೋಷ್ ನಿರೂಪಿಸಿ, ಸಂದೀಪ್ ಸ್ವಾಗತಿಸಿ ಸ್ವಯಂಸೇವಕಿ ಪಲ್ಲವಿ ವಂದಿಸಿದರು.

Leave a Reply

Your email address will not be published. Required fields are marked *