ಧರ್ಮಸ್ಥಳ:(ಜೂ.18) ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು.

ಇದನ್ನೂ ಓದಿ: ⭕ಕುಂದಾಪುರ : ಖಾಸಗಿ ಬಸ್ಗೆ ಬೈಕ್ ಡಿಕ್ಕಿ
“ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷ ವಾಕ್ಯದೊಂದಿಗೆ ನ್ಯಾಚುರೋಪತಿ ಕಾಲೇಜು ಉಜಿರೆ, ಇದರ ಪ್ರೊಫೆಸರ್ ಆದ ಡಾ.ಹರ್ಷಿಣಿ ಅವರು ಉದ್ಘಾಟನೆಯನ್ನು ಮಾಡಿ ಮಾತನಾಡಿ ಪರಿಸರದಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮಗಳು ಮತ್ತು ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಉಂಟಾಗುವ ಪ್ರಯೋಜನಗಳನ್ನು ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ರಜಪೂತ್ ಹಾಗೂ ಕಾಲೇಜಿನ ವಿದ್ಯಾರ್ಥಿನಿಯರಾದ ಡಾ .ಕೀರ್ತನ ಮತ್ತು ಡಾ. ವೈಷ್ಣವಿ ಯವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮಕ್ಕೆ ಶ್ರೀಮತಿ ಶ್ರೀಜಾ ಸ್ವಾಗತಿಸಿದರು ಹಾಗೂ ಶ್ರೀಮತಿ ಸೀಮಾ ವಂದಿಸಿದರು. ದೈಹಿಕ ಶಿಕ್ಷಕರಾದ ಸಂಜೀವ ಕೆ ಕಾರ್ಯಕ್ರಮ ಸಂಘಟಿಸಿದರು.


