Sun. Aug 3rd, 2025

Kundapur: ಖಾಸಗಿ ಬಸ್‌ಗೆ ಬೈಕ್‌ ಡಿಕ್ಕಿ – ಬೈಕ್‌ ಸವಾರ ಸ್ಪಾಟ್‌ ಡೆತ್‌ – ಬೈಕ್ ಸಂಪೂರ್ಣ ಸುಟ್ಟು ಭಸ್ಮ

ಕುಂದಾಪುರ,(ಜೂ.18) : ಖಾಸಗಿ ಬಸ್‌ಗೆ ಬೈಕ್ ಡಿಕ್ಕಿಯಾಗಿ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟು ಬೈಕ್ ಸಂಪೂರ್ಣ ಸುಟ್ಟು ಕರಕಲಾದ ದುರಂತ ಘಟನೆ ಹೆಮ್ಮಾಡಿ ವಂಡ್ಲೆ ರಸ್ತೆಯ ಮಲ್ಲಾರಿ ಬಳಿ ನಡೆದಿದೆ.

ಇದನ್ನೂ ಓದಿ: 🟣ಬೆಳ್ತಂಗಡಿ: 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ಸಿಗಂದೂರಿನ ಶರತ್ (25) ಮೃತ ಬೈಕ್‌ ಸವಾರ ಎಂದು ಗುರುತಿಸಲಾಗಿದೆ.

ಶರತ್‌ ಸಿಗಂದೂರಿನಿಂದ ಕುಂದಾಪುರದ ಸಂಬಂಧಿಕರ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ, ಕೆಂಚನೂರು ಮಲ್ಲಾರಿ ಬಳಿಯ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ, ಹೆಮ್ಮಾಡಿಯಿಂದ ವಂಡ್ಲೆ ಕಡೆಗೆ ತೆರಳುತ್ತಿದ್ದ ಶ್ರೀ ದುರ್ಗಾಂಬಾ ಖಾಸಗಿ ಬಸ್‌ಗೆ ನೇರವಾಗಿ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಶರತ್‌ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್‌ಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದೆ.

ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *