ಮಂಗಳೂರು :(ಜೂ.18) ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ⭕ಉಡುಪಿ : ಖಾಸಗಿ ಬಸ್ ಚಾಲಕನ ಹುಚ್ಚಾಟ
ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯಕ್ತರಾಗಿದ್ದ ದರ್ಶನ್ ಎಚ್.ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೈ ಮುಗಿಲನ್ ಅವರ ಅವಧಿಯಲ್ಲಿ ಮಕ್ಕಳಿಗೆ ಮಳೆಗಾಗಿ ಅತೀ ಹೆಚ್ಚು ರಜೆ ಸಿಕ್ಕಿದ್ದರಿಂದ ಮುಲ್ಲೈ ಮುಗಿಲನ್ ಅವರು ಮಕ್ಕಳಿಗೆ ನೆಚ್ಚಿನ ಡಿಸಿಯಾಗಿದ್ದರು.
ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇದುವರೆಗೆ ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ ಡಿಸಿ ಆಗಿ ನೇಮಿಸಲಾಗಿದೆ.



