Thu. Jun 19th, 2025

Mangalore: ಹೆಡ್ ಕಾನ್ಸ್ಟೇಬಲ್ ರಶೀದ್ ಸೇರಿ 56 ಪೊಲೀಸ್ ಸಿಬ್ಬಂದಿ ವರ್ಗಾವಣೆ

ಮಂಗಳೂರು (ಜೂನ್ 19): ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ಪರೋಕ್ಷವಾಗಿ ನೆರವಾಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದ ಬಜ್ಪೆ ಠಾಣೆ ಹೆಡ್ ಕಾನ್ಸ್‌ಟೇಬಲ್ ರಶೀದ್ ಸೇರಿದಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: 🟣ಬೆಳ್ತಂಗಡಿ: ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿ ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ

ಕರಾವಳಿಯಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್​ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ನಡೆಯುತ್ತಿದೆ. 56 ಪೊಲೀಸ್ ಸಿಬ್ಬಂದಿಯ ವರ್ಗಾವಣೆ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದು, ಇನ್ನೂ ನೂರಾರು ಸಂಖ್ಯೆಯಲ್ಲಿ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

ಹಲವು ವರ್ಷಗಳಿಂದ ಒಂದೇ ಕಡೆ ಇದ್ದ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಬಜ್ಪೆ ಠಾಣೆ ಹೆಡ್ ಕಾನ್ಸ್‌ಟೇಬಲ್ ರಶೀದ್​ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಹೆಡ್ ಕಾನ್ಸ್‌ಟೇಬಲ್ ರಶೀದ್ ಸುಹಾಸ್ ಹಂತಕರ ಜತೆ ಕೈಜೋಡಿಸಿದ್ದರು ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದರು.

Leave a Reply

Your email address will not be published. Required fields are marked *