Akhila Pajimannu:(ಜೂ.20 ) ಕನ್ನಡಿಗರ ಮನಗೆದ್ದ ಗಾಯಕಿ ಅಖಿಲಾ ಪಜಿಮಣ್ಣು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದಾರೆ. ಕನ್ನಡ ಕೋಗಿಲೆ ಮೂಲಕ ಭಾರಿ ಜನಪ್ರಿಯತೆ ಗಳಿಸಿದ ಅಖಿಲಾ ಬಳಿಕ ಹಲವು ವೇದಿಕೆಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ⭕ಬ್ರಹ್ಮಾವರ: ಕತ್ತಿಯಿಂದ ಕಡಿದು ಪತ್ನಿಯ ಕೊಲೆ ಮಾಡಿದ ಪತಿ
ಕನ್ನಡ ಕೋಗಿಲೆ 1 ಹಾಗೂ 2ನೇ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿರುವ ಅಖಿಲಾ ಪಜಿಮಣ್ಣು ತಮ್ಮ ಸುಮಧುರ ಕಂಠದಿಂದ ಎಲ್ಲರ ಮನೆ ಮಾತಾಗಿದ್ದಾರೆ. ಆದರೀಗ ಅವರ ಬಾಳಲ್ಲಿ ಬಿರುಗಾಳಿ ಎದ್ದಿದೆ. ಹೌದು ಗಾಯಕಿ ಅಖಿಲಾ ಪಜಿಮಣ್ಣು ಮತ್ತು ಆಕೆಯ ಪತಿ ಟಿ.ಆರ್. ಧನರಾಜ್ ಶರ್ಮರಿಂದ ವಿವಾಹ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪುತ್ತೂರು ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದೆ ಜೋಡಿ. ಕಳೆದ ಮೂರು ವರ್ಷಗಳ ಹಿಂದೆ ಜೋಡಿ ಮದುವೆ ಆಗಿತ್ತು. ಅಖಿಲಾ ಪಜಿಮಣ್ಣು ಪುತ್ತೂರಿನ ಪಜಿಮಣ್ಣು ಎನ್ನುವ ಗ್ರಾಮದ ನಿವಾಸಿ. ಅಮೆರಿಕಾದಲ್ಲಿ ಇಂಜಿನಿಯರ್ ಆಗಿದ್ದ ಧನರಾಜ್ ಅವರನ್ನು ವಿವಾಹವಾಗಿದ್ದರು ಅಖಿಲಾ. ಜೂನ್ 12 ರಂದು ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದೆ ಜೋಡಿ.
ಜೂನ್ 20 ಕ್ಕೆ ನ್ಯಾಯಾಲಯದಲ್ಲಿ ಮತ್ತೆ ವಿಚಾರಣೆ ಆಗಲಿದ್ದು. ಪರಸ್ಪರ ಒಪ್ಪಂದದ ಮೂಲಕ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪುತ್ತೂರಿನ ವಕೀಲ ಮಹೇಶ್ ಕಜೆ ಮೂಲಕ ಅರ್ಜಿ ಸಲ್ಲಿಸಿದ್ದಾರೆ.


ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಇಬ್ಬರು ಒಪ್ಪಿಗೆ ಮೇರೆಗೆ ಬೇರೆ ಬೇರೆಯಾಗಲು ನಿರ್ಧರಿಸಿದ ಬೆನ್ನಲ್ಲೇ ಅಖಿಲಾ ಪಜಿಮಣ್ಣು ಸೋಶಿಯಲ್ ಮೀಡಿಯಾ ಖಾತೆಗಳಿಂದ ದಾಂಪತ್ಯ ಜೀವನದ ಫೋಟೋಗಳು ಡಿಲೀಟ್ ಆಗಿದೆ.

ಕನ್ನಡಿಗರ ಮನಗೆದ್ದ ಗಾಯಕಿ ಅಖಿಲಾ ಪಜಿಮಣ್ಣು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದಾರೆ. ಕನ್ನಡ ಕೋಗಿಲೆ ಮೂಲಕ ಭಾರಿ ಜನಪ್ರಿಯತೆ ಗಳಿಸಿದ ಅಖಿಲಾ ಬಳಿಕ ಹಲವು ವೇದಿಕೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ ಕೋಗಿಲೆ ಬಳಿಕ ಅಖಿಲಾ ಮುಂಜಾನೆ ರಾಗ ಕಾರ್ಯಕ್ರಮದ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದರು.
