ಉಜಿರೆ:(ಜೂ.22) 11ನೇ ವಿಶ್ವ ಯೋಗ ದಿನದ ಪ್ರಯುಕ್ತ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ವತಿಯಿಂದ ಯೋಗ ಶಿಬಿರವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: ⭕ಇಳಂತಿಲ: ಇಳಂತಿಲ ಗ್ರಾಮ ಪಂಚಾಯತ್ ಸದಸ್ಯ ಸುಪ್ರೀತ್ ನಿಧನ
ಶಿಬಿರವನ್ನು ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಧ್ಯಾಪಕಿ ಡಾ. ಹರ್ಷಿಣಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ” ಯೋಗ ಮನಸ್ಸನ್ನು ಹತೋಟಿಯಲ್ಲಿ ಇಡಲು ಸಹಕಾರಿ. ಪ್ರತಿ ದಿನ ಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು “ಎಂದು ಹೇಳಿದರು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ ” ಯೋಗ ಶಿಬಿರದಲ್ಲಿ ಕಲಿತ ಯೋಗ ಜ್ಞಾನವನ್ನು ಬರಿ ಇಲ್ಲಿಗೆ ಸೀಮಿತಗೊಳಿಸದೆ ಮುಂದೆಯೂ ಅಳವಡಿಸಿಕೊಂಡು ಆರೋಗ್ಯವಂತ ಜೀವನ ನಡೆಸುವಂತಾಗಲಿ ” ಎಂದು ಹೇಳಿದರು.


ವೇದಿಕೆಯಲ್ಲಿ ಉಜಿರೆ ಎಸ್ ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಡಾ.ಚೇತನಾ ಭಟ್ , ಜೀವ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಕೋಮಲ್ ಪಿ ಸಿ, ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್,ಸಹಯೋಜನಾಧಿಕಾರಿ ಶ್ರೀಮತಿ ಶೋಭಾ ಪಿ ಉಪಸ್ಥಿತರಿದ್ದರು.
ಸ್ವಯಂ ಸೇವಕಿ ರಾಶಿಕಾ ನಿರೂಪಿಸಿ ನಾಗಲಕ್ಷ್ಮಿ ಸ್ವಾಗತಿಸಿ ಮೌಲ್ಯ ವಂದಿಸಿದರು.

