Mon. Jun 23rd, 2025

Shirlalu: ಜನವಿರೋಧಿ ಕಾಂಗ್ರೆಸ್‌ ಸರಕಾರದ ವಿರುದ್ಧ ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

ಶಿರ್ಲಾಲು:(ಜೂ.23) ಜನವಿರೋಧಿ ಕಾಂಗ್ರೆಸ್‌ ಸರಕಾರದ ವಿರುದ್ಧ ಶಿರ್ಲಾಲು ಗ್ರಾಮ ಪಂಚಾಯತ್ ಮತ್ತು ಶಿರ್ಲಾಲು ಕರಂಬಾರು ಬಿಜೆಪಿಯ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ನಡೆಸಿದರು.

ಇದನ್ನೂ ಓದಿ: ⭕ಕಡಬ: ಕಾಂಗ್ರೆಸ್ ಜನವಿರೋಧಿ ನೀತಿ ಆರೋಪಿಸಿ ಬಿಜೆಪಿ ಘಟಕದಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಮಂಡಲ ಕಾರ್ಯದರ್ಶಿ ಪ್ರಶಾಂತ್‌ ಪಾರೆಂಕಿ ಹಾಗೂ ಮಾಜಿ ಸಿ.ಎ ಬ್ಯಾಂಕ್‌ ಅಧ್ಯಕ್ಷರಾದ ನವೀನ್‌ ಕೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಾಧವ ಶಿರ್ಲಾಲು ಉಪಸ್ಥಿತರಿದ್ದರು. ಸದಾಶಿವ ಕರಂಬಾರು ಕಾರ್ಯಕ್ರಮವನ್ನು ನಿರೂಪಿಸಿದರು.

ಪ್ರತಿಭಟನೆಯಲ್ಲಿ ಶಿರ್ಲಾಲು ಕರಂಬಾರಿನ 150 ಕ್ಕೂ ಹೆಚ್ಚು ಗ್ರಾಮಸ್ಥರು ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಿದರು.

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಪ್ರಸಾದ್‌ ಶೆಟ್ಟಿ, ಉಪಾಧ್ಯಕ್ಷರಾದ ಸೋಮನಾಥ, ಹಾಗೂ ಹಾಲಿನ ಸೊಸೈಟಿ ನಿರ್ದೇಶಕರು, ಸಿ.ಎ ಬ್ಯಾಂಕ್‌ ನ ನಿರ್ದೇಶಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *