Wed. Jun 25th, 2025

Dharmasthala: ಧರ್ಮಸ್ಥಳ ಗ್ರಾಮ ಪಂಚಾಯತ್ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವುಗೊಳಿಸಿ ಕ್ರಮ

ಧರ್ಮಸ್ಥಳ :(ಜೂ.25) ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಗ್ರಾಮ ಪಂಚಾಯತ್ ರಸ್ತೆಗಳ ಬದಿಗಳಲ್ಲಿ ಅನಧಿಕೃತವಾಗಿ ಹಾಕಿರುವ ಬ್ಯಾನರ್, ಬಂಟಿಂಗ್ಸ್‌, ಜಾಹೀರಾತು ಫಲಕ, ಇತರ ನಾಮ ಫಲಕಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ರವರು ತೆರವುಗೊಳಿಸಿದರು.

ಇದನ್ನೂ ಓದಿ: 💐🟣ಉಜಿರೆ: ಉಜಿರೆಯ ಶ್ರೀ ಧ.ಮಂ. ಕಾಲೇಜಿಗೆ ರಾಷ್ಟ್ರ ಮಟ್ಟದ ವಿಶೇಷ ಮಾನ್ಯತೆ

ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಈ ಮೊದಲೇ ಗ್ರಾಮ ಪಂಚಾಯತ್‌ ನಿಂದ ಪತ್ರಿಕಾ ಪ್ರಕಟಣೆ ಹಾಗೂ ಧ್ವನಿವರ್ಧಕಗಳ ಮೂಲಕ ಸೂಚನೆಯನ್ನು ನೀಡಲಾಗಿತ್ತು. ಸದ್ರಿ ಜಾಹೀರಾತು ಫಲಕಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿರುವ ಬಗ್ಗೆ ಹಾಗೂ ಅನಧಿಕೃತ ವಸತಿ ಗ್ರಹಗಳಿಂದ ತೊಂದರೆ ಆಗುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳು ಬಂದಿದ್ದು. ಮೇಲಾಧಿಕಾರಿಗಳ ಆದೇಶದಂತೆ ಕ್ರಮ ಕೈಗೊಳ್ಳಲಾಯಿತು. ಈ ಹಿಂದೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಹಾಕಿರುವ ಅನಧಿಕೃತ ಗೂಡಂಗಡಿಗಳನ್ನು ಕೂಡ ತೆರವುಗೊಳಿಸಲಾಗಿತ್ತು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಸಹಕಾರ ನೀಡಿದರು. ಅನಧಿಕೃತವಾಗಿ ಹಾಕದಂತೆ ಸೂಚನೆ ನೀಡಲಾಯಿತು

ಈ ಸಂದರ್ಭದಲ್ಲಿ ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಸಿಬ್ಬಂದಿಗಳಾದ ದೇವಪ್ರಸಾದ್ ಬೊಲ್ಮ, ಶಿವಾನಂದ, ಗಜಾನನ, ವಂದನಾ , ಶೇಖರ, ಮಹಮ್ಮದ್ ಶಾಫಿ, ನಾಗರಾಜ, ಶೇಖರ ಗೌಡ, ದಿನೇಶ್, ಜಗನ್ನಾಥ, ಡಿ.ಎಸ್ ಬಾಬು, ಸುಲೇಮಾನ್, ವೀರಪ್ಪ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *