Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Mangaluru: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

ಮಂಗಳೂರು :(ಜೂ.25) ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕೋಡಿಕಲ್‌ನಲ್ಲಿ ನಡೆದಿದೆ.

ಇದನ್ನೂ ಓದಿ: 🌧ಶಿಶಿಲ: ಎಡೆಬಿಡದೆ ಸುರಿಯುತ್ತಿರುವ ಮಳೆ – ಶ್ರೀ ಶಿಶಿಲೇಶ್ವರ ದೇವಾಲಯ ಜಲಾವೃತ


ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಮೃತ ಯುವಕ. ಆ್ಯಪ್‌ಗಳಲ್ಲಿ ಸಾಲ ಪಡೆದು ತೀರಿಸಲಾಗದೇ ಆರ್ಥಿಕ ಹೊರೆಯಿಂದ ಬೇಸತ್ತು ನಿಖಿಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.


ನಿಖಿಲ್ ಎಂದಿನಂತೆಯೇ ಬೆಳಗ್ಗೆ ಮನೆಯಲ್ಲಿ ಉಪಹಾರ ಸೇವಿಸಿ ತಮ್ಮ ಕೋಣೆ ಸೇರಿದ್ದರು. ಆ ಬಳಿಕ ಅವರು ಕೋಣೆಯಿಂದ ಹೊರ ಬಂದಿರಲಿಲ್ಲ. ಸಂಜೆಯವರೆಗೆ ಅವರು ಮಲಗುವ ಅಭ್ಯಾಸ ಇರುವ ಕಾರಣ ಮನೆಯವರು ಇತ್ತ ಕಡೆ ಹೆಚ್ಚಿನ ಗಮನ ಹರಿಸಿರಲಿಲ್ಲ. ಆದರೆ ಸಂಜೆ ಬಳಿಕ ಬಾಗಿಲು ಬಡಿದರೂ ತೆಗಿದಿಲ್ಲ. ಫೋನ್ ಕರೆಯನ್ನು ಸ್ವೀಕರಿಸುತ್ತಿರಲಿಲ್ಲ.

ಆದ್ದರಿಂದ ಬಾಗಿಲಿನ ಸಂದಿಯಿಂದ ನೋಡಿದಾಗ ನಿಖಿಲ್ ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಆತನಿಗೆ ಆರ್ಥಿಕ ಹೊರೆಯಿತ್ತು. ಬೇರೆ ಬೇರೆ ಆ್ಯಪ್‌ ಗಳಲ್ಲಿ ಆತ ಸಾಲ ಪಡೆದಿದ್ದು, ಗಮನಕ್ಕೆ ಬಂದಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *