ಉಜಿರೆ:(ಜೂ.26) “ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ“ ದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಯಿತು.

ಇದನ್ನೂ ಓದಿ : 🔴ಪುತ್ತೂರು: ಪುತ್ತೂರು ತಾಲೂಕು ತುಳುವ ಮಹಾಸಭೆಗೆ ತುಳು ಲಿಪಿಯ ಹರಿಕಾರಿಣಿ
ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್,ಬಿ ವಹಿಸಿದ್ದರು.

ನಶಾ ಮುಕ್ತ ಭಾರತದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಮಾದಕ ದ್ರವ್ಯ ವ್ಯಸನ ಹಾಗೂ ಅದರ ದುಷ್ಪರಿಣಾಮದ ಬಗ್ಗೆ ಎಲ್ಲ ವಿದ್ಯಾರ್ಥಿಗಳು ಈ ಮೂಲಕ ನಶಾಮುಕ್ತ ಭಾರತದ ಪ್ರತಿಜ್ಞೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ಪೊಲೀಸ್ ನಿರೀಕ್ಷಕರಾದ ಬಿ. ಜಿ. ಸುಬ್ಬಾಪುರ್ ಮಠ್, ಬೆಳ್ತಂಗಡಿಯ ಸಿಪಿಐ ನಾಗೇಶ್ ಕದ್ರಿ, ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ಹಾಗೂ ವ್ಯಸನಮುಕ್ತ ಕೇಂದ್ರದ ನಿರ್ದೇಶಕರಾದ ವಿವೇಕ್ , ಎನ್.ಎನ್.ಎಸ್ ಘಟಕದ ಸಂಯೋಜಕರಾದ ವಿಶ್ವನಾಥ್ ಎಸ್. ಡಿ. ಎಂ ಕಾಲೇಜಿನ ಉಪಪ್ರಾಚಾರ್ಯರಾದ ಡಾ. ರಾಜೇಶ್ ಬಿ, ಬೆಳ್ತಂಗಡಿ ಪೋಲಿಸ್ ಸಿಬ್ಬಂದಿ, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


