ಪುತ್ತೂರು:(ಜು.27) ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಭವನದಲ್ಲಿ ಶುಕ್ರವಾರ ನಡೆಯಿತು.

ಇದನ್ನೂ ಓದಿ: ⭕Kolkata Law College : ಕಾನೂನು ವಿದ್ಯಾರ್ಥಿನಿ ಮೇಲೆ ಕಾಲೇಜಿನ ಆವರಣದೊಳಗೆ ಸಾಮೂಹಿಕ ಅತ್ಯಾಚಾರ
ಪುತ್ತೂರು ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು.
ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಆರ್. ನಿಡ್ನಳ್ಳಿ ಸಂಸ್ಮರಣಾ ಉಪನ್ಯಾಸ ಮಾಡಿ, ದಾರ್ಶನಿಕ, ಮೇಧಾವಿ, ಮಹಾತ್ಮ ಎನಿಸಿಕೊಂಡ ಕೆಂಪೇಗೌಡ ಬದುಕು, ಸಾಧನೆ ನೋಡಿದಾಗ ನಮ್ಮನ್ನು ನಾವು ಆತ್ಮಾವಲೋಕನ ಮಾಡಬೇಕಾದ ಅನಿವಾರ್ಯತೆಯಿದ್ದು, ಈ ಮೂಲಕ ಸಮಾಜ ಕಟ್ಟುವ ಕೆಲಸ ಮಾಡಬೇಕಾಗಿದೆ.
ಅವರು ನಾಡನ್ನು ಕಟ್ಟಿದ ತುಡಿತ ಅದ್ಭುತವಾಗಿದೆ. ಅವರ 11ನೇ ವಯಸ್ಸಿನ ಕನಸು ಬೆಂಗಳೂರಿನ ಸಿಲಿಕಾನ್ ಸಿಟಿ. ದೂರದೃಷ್ಟಿತ್ವವನ್ನು ನೋಡಿದಾಗ 16ನೇ ಶತಮಾನದಲ್ಲೇ ಕೃತಕ ಬುದ್ಧಿಮತ್ತೆ ಅವರಲ್ಲಿತ್ತು. ಬೆಂಗಳೂರನ್ನು ಸ್ಥಾಪಿಸಲು ಭದ್ರಬುನಾದಿ ಕೊಟ್ಟವರೇ ಕೆಂಪೇಗೌಡರು. ನೀರಿನ ಅಭಾವವಾಗದಂತೆ ಯೋಚನೆಗಳನ್ನು ರೂಪಿಸಿದ್ದಾರೆ. ಆದರೆ ದುರಾದೃಷ್ಟವಶಾತ್ ಇಂದು ಅವುಗಳನ್ನು ಉಳಿಸಿಕೊಳ್ಳುವುದರಲ್ಲಿ ಹಿಂದೆ ಬಿದ್ದಿದ್ದೇವೆ. ಅವರ 500 ವರ್ಷಗಳ ದೂರದೃಷ್ಟಿಯುಳ್ಳ ಬೆಂಗಳೂರು ಇಡೀ ಜಗತ್ತನ್ನು ತನ್ನತ್ತ ಸೆಳೆಯುತ್ತಿದೆ. ಇದರ ಹಿಂದಿರುವ ಶಿಲ್ಪಿ ಕೆಂಪೇಗೌಡರು ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ,ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್,ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ತಹಶೀಲ್ದಾರ್ ನಾಗರಾಜ್ ವಿ., ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್ ಉಪಸ್ಥಿತರಿದ್ದರು. ಸಮಾರಂಭದಲ್ಲಿ ವಿವಿಧ ಇಲಾಖಾ ಅಧಿಕಾರಿಗಳು, ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಶಿಕ್ಷಕರು ಉಪಸ್ಥಿತರಿದ್ದರು.



