Fri. Jun 27th, 2025

Puttur: ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಪುತ್ತೂರು: (ಜೂ.27)ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಯುವತಿ ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:🟠ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಪುತ್ತೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿದ ಬಳಿಕ ವಂಚಿಸಿ ಪರಾರಿಯಾಗಿರುವ ಘಟನೆಗೆ ಸಂಬಂಧಿಸಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿ ದಿಢೀರ್ ರದ್ದಾದ ಘಟನೆ ನಡೆದಿದೆ.

ಪುತ್ತೂರಿನ ಬಪ್ಪಳಿಗೆ ನಿವಾಸಿಯಾಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿ ಶ್ರೀಕೃಷ್ಣ ಜೆ.ರಾವ್ ಎಂಬಾತನಿಂದ ವಂಚನೆಗೆ ಒಳಗಾಗಿದ್ದಾರೆ ಎಂದು ಹೇಳಲಾಗುತ್ತಿರುವ ವಿದ್ಯಾರ್ಥಿನಿಯ ತಾಯಿ ಪುತ್ತೂರು ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಿಗದಿ ಪಡಿಸಿದ್ದರು.
ಇದರ ಮಾಹಿತಿ ತಿಳಿದ ಪತ್ರಕರ್ತರು ಪತ್ರಿಕಾಗೋಷ್ಠಿಗೆ ಆಗಮಿಸಿದ್ದರು. ಆದರೆ ಕೊನೇಯ ಘಳಿಗೆಯಲ್ಲಿ ಪತ್ರಿಕಾಗೋಷ್ಠಿ ರದ್ದು ಪಡಿಸಲಾಗಿದೆ.

ಈ ಮಧ್ಯೆ ತಲೆ ಮರೆಸಿಕೊಂಡಿರುವ ವಿದ್ಯಾರ್ಥಿಯ ಪತ್ತೆಗೆ ಪೊಲೀಸರ ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *