Mon. Jun 30th, 2025

Belthangady: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ:(ಜೂ.30) ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ವಕೀಲರ ಸಂಘ(ರಿ) ಬೆಳ್ತಂಗಡಿ ಹಾಗೂ ಎಸ್ ಡಿಎಮ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 30/06/25 ರಂದು ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಇದನ್ನೂ ಓದಿ: ⭕ಪುತ್ತೂರು: “ನನ್ನ ಮಗಳಿಗೆ ನ್ಯಾಯ ಸಿಗದಿದ್ದರೆ ನಾವು ಬಿಡುವುದಿಲ್ಲ”

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸಂದೇಶ್ ಕೆ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ತಾ.ಕಾ.ಸೇ.ಸ ಬೆಳ್ತಂಗಡಿಯವರು ನೆರವೇರಿಸಿ ಕಾನೂನಿನ ಬಗ್ಗೆ ತಿಳಿದುಕೊಂಡರೆ ನಮಗೆ ಸಿಗಬೇಕಾದ ಹಕ್ಕನ್ನು ನಾವು ಪಡೆದುಕೊಳ್ಳಲು ಸಾಧ್ಯ. ಕಾನೂನಿನ ಬಗ್ಗೆ ತಿಳಿದು ನಿಮ್ಮ ಹಿರಿಯರಿಗೆ ಕಿರಿಯರಿಗೆ ಹೇಳಿದರೆ ಈ ಕಾರ್ಯಕ್ರಮವು ಸಾರ್ಥಕತೆಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶ್ರೀ ಜೀತಿನ್ ಜೆಜೋ ವಕೀಲರ ಬೆಳ್ತಂಗಡಿ ಇವರು ಬಾಲಕಾರ್ಮಿಕರೆಂದರೆ ಯಾರು? ಬಾಲ ಕಾರ್ಮಿಕರ ಹಕ್ಕುಗಳ ಬಗ್ಗೆ ಮತ್ತು ಮಕ್ಕಳು ಮತ್ತು ಹದಿ ಹರೆಯದವರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಯ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ವಸಂತ ಮರಕಡ ಅಧ್ಯಕ್ಷರು ವಕೀಲರ ಸಂಘ ಬೆಳ್ತಂಗಡಿ ಮತ್ತು ಶ್ರೀ ನವೀನ್ ಬಿ ಕೆ ಪ್ರಧಾನ ಕಾರ್ಯದರ್ಶಿಗಳು ವಕೀಲರ ಸಂಘ, ಬೆಳ್ತಂಗಡಿ ಉಪಸ್ಥಿತರಿದ್ದರು. ಪ್ರಭಾರ ಮುಖ್ಯೋಪಾಧ್ಯಾಯನಿ ಜೆಸಿಂತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿಯಾದ ಶ್ರೀಮತಿ ಪ್ರವೀಣಾ ಕಾಮತ್ ರವರು ಸ್ವಾಗತಿಸಿ, ಶಿಕ್ಷಕಿ ಯಾದ ಅಮಿತಾ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *