Mon. Jun 30th, 2025

Hosangady: ಪರಿಸರ ಮಾಹಿತಿ- ಗಿಡ ನಾಟಿ ಕಾರ್ಯಕ್ರಮ

ಹೊಸಂಗಡಿ :(ಜೂ.30) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಹಾಗೂ ಸ ಹಿ ಪ್ರಾ ಶಾಲೆ ಕಾಶಿಪಟ್ಣ ಇವರ ಸಹಕಾರದೊಂದಿಗೆ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಇದನ್ನೂ ಓದಿ: 🟠ಉಜಿರೆ : ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ


ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಸುಬ್ಬಣ್ಣ ಪೂಜಾರಿ ಗಿಡನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಜನೆ ವತಿಯಿಂದ ರಾಜ್ಯಾದ್ಯಂತ ಪರಿಸರ ಜಾಗೃತಿ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ಪ್ರಾಣಿ ಪಕ್ಷಿ ಗಳಿಗೆ ಎಲ್ಲಾ ಸಮಯದಲ್ಲಿ ಆಹಾರ ಸಿಗುವಂತೆ ಹೆಚ್ಚು ಹೆಚ್ಚು ಹಣ್ಣಿನ ಗಿಡವನ್ನು ನಾಟಿ ಮಾಡುತ್ತಿದ್ದು, ಪ್ರಾಣಿ ಪಕ್ಷಿ ಗಳಿಗೆ ಅನುಕೂಲವಾಗುತ್ತದೆ. ಅದನ್ನು ನಾವು ರಕ್ಷಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು
.

ಗಿಡ ನಾಟಿ ಕಾರ್ಯಕ್ರಮವನ್ನು ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ವಿದ್ಯಾನಂದ ಪೂಜಾರಿಯವರು ಹಣ್ಣಿನ ಗಿಡ ನಾಟಿ ಮಾಡುವ ಮುಖಾಂತರ ಚಾಲನೆ ನೀಡಿ ಪರಿಸರ ನಾಶ ದಿಂದ ಮನುಕುಲ ಕ್ಕೆ ಆಗುವ ತೊಂದರೆಯ ಬಗ್ಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕಿ ವೀಣಾ, ಒಕ್ಕೂಟ ಅಧ್ಯಕ್ಷರು ಸಂಜೀವ, ಜಯಂತಿ, ಕಾಂತಪ್ಪ ಪೂಜಾರಿ, ಕಾರ್ಯಕ್ರಮದಲ್ಲಿ ವಿಪತ್ತು ನಿರ್ವಹಣಾ ಘಟಕ ಸದಸ್ಯರು ಗಿಡ ನಾಟಿ ಮಾಡುವ ಮೂಲಕ ಶ್ರಮದಾನ ದಲ್ಲಿ ಭಾಗವಹಿಸಿದರು. ಒಕ್ಕೂಟದ ಉಪಾಧ್ಯಕ್ಷರು ವಸುಧ, ಸೇವಾ ಪ್ರತಿನಿಧಿ ಶಶಿಕಲಾ ಹಾಗೂ ಮಮತಾ ಹಾಗೂ ಶಾಲಾ ಶಿಕ್ಷಕ ವೃಂದ, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *