Wed. Jan 14th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

2026’te kullanıcı dostu tasarımıyla bahsegel sürümü geliyor.

Dijital oyun deneyimini artırmak için bahsegel platformları kullanılıyor.

Rulet masalarındaki krupiyeler, Bahsegel indir apk tarafından düzenli olarak eğitilir ve lisanslıdır.

Subrahmanya: ಗೃಹ ಸಚಿವ ಡಾ. ಜಿ. ಪರಮೇಶ್ವರ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ – ಭವ್ಯ ಸ್ವಾಗತ ಕೋರಿದ ಕಾಂಗ್ರೆಸ್ ಮತ್ತು ದೇವಸ್ಥಾನದ ಆಡಳಿತ ಸಮಿತಿ

ಸುಬ್ರಹ್ಮಣ್ಯ:(ಜು.9) ಶ್ರೀ ಕ್ಷೇತ್ರ ಸುಬ್ರಹ್ಮಣ್ಯಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ದೇವಸ್ಥಾನದ ಆಡಳಿತ ಸಮಿತಿಯು ಆದಿಶೇಷ ಗೆಸ್ಟ್ ಹೌಸ್‌ನಲ್ಲಿ ಭವ್ಯ ಸ್ವಾಗತವನ್ನು ಕೋರಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಕೇವಲ ಹೇಳಿಯಾಗಿ ನಾನು ಈ ರೀತಿಯಾಗಿ ಹೇಳುತ್ತಿಲ್ಲ ಇತ್ತೀಚೆಗೆ ನಡೆದ ಕಾನ್ಫೆರೆನ್ಸ್ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ, ವಿವಿಧ ಅಪರಾಧಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕ್ರೈಮ್ ರೇಟ್ ಕಡಿಮೆಯಾಗಿರುವುದು ಕಂಡುಬಂದಿದೆ. ಕಾನೂನುನನ್ನು ಬಹಳ ಕಠಿಣವಾಗಿ ತೆಗೆದುಕೊಂಡಿದ್ದರಿಂದ ಕ್ರೈಮ್ ರೇಟ್ ಕಡಿಮೆಯಾಗಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಗಮನಿಸಿದಾಗ ಕಠಿಣ ಕ್ರಮಕೈಗೊಂಡ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರಲು ಸಾಧ್ಯವಾಗಿದೆ ಎಂದರು.
ವಿಶೇಷ ಕಾರ್ಯಪಡೆ ರಚನೆಯಿಂದ ಶಾಂತಿ-ಸುವ್ಯವಸ್ಥೆಗೆ ಪೂರಕವಾಗಿದೆ. ಈ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ. ಬೆಂಗಳೂರು ಬಳಿಕ ಬೆಳೆಯುವಲ್ಲಿ ಅವಕಾಶಗಳಿರುವ ಕರಾವಳಿಯಲ್ಲಿ ಶಾಂತಿ ಅತೀ ಮುಖ್ಯ, ಅದಕ್ಕಾಗಿ ಈ ಭಾಗಕ್ಕೆ ಹೆಚ್ಚು ಗಮನ ಹರಿಸುತ್ತೇವೆ. ಒಂದೆರಡು ಜನ ಬೇರೆ ರೀತಿಯಲ್ಲಿ ಇದ್ದರೂ ಜಿಲ್ಲೆಯ ಜನ ಉತ್ತಮರಾಗಿರುವವರು ಎಂದರು. ಪೊಲೀಸರ ವರ್ಗಾವಣೆಯಿಂದ ಏನು ಪರಿಣಮ ಎಂದು ನೀವು ಹೇಳಬೇಕು ಎಂದರು.
ಎಲ್ಲರೂ ಚೆನ್ನಾಗಿದ್ದರೆ ಪೊಲೀಸ್‌ನವರು ಯಾಕೆ ತಪ್ಪು ಮಾಡಿದವರನ್ನು ಸರಿಪಡಿಸಲು ಪೊಲೀಸ್ ಇಲಾಖೆ ಇದೆ. ಅದಕ್ಕಾಗಿ ಕಾನೂನು, ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು. ಬುಧವಾರ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಎಲ್ಲಾ ವರ್ಗದ ಜನರೊಂದಿಗೆ ಸಭೆ ನಡೆಸುತ್ತೇವೆ. ಅಲ್ಲಿ ಸಲಹೆಗಳನ್ನು ಪಡೆದು ಮುಂದಿನ ಕ್ರಮಕೈಗೊಳ್ಳುತ್ತೇವೆ.
ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಲು ನೇಮಕಾತಿ ನಡೆಯುತ್ತಿದೆ. 545 ಎಸೈಗಳಿಗೆ ಆದೇಶ ನೀಡಲಾಗಿದ್ದು, ತರಬೇತಿಗೆ ಹೋಗಿದ್ದಾರೆ. ಇನ್ನೂ 402 ಹುದ್ದೆಗೆ ಆದೇಶವಾಗಲಿದೆ.10-15 ಸಾವಿರ ಕಾನ್ಸ್ಟೇಬಲ್ ಹುದ್ದೆ ಖಾಲಿ ಇದೆ. ಅದನ್ನು ಭರ್ತಿ ಮಾಡಲು ಕ್ರಮಕೈಗೊಳ್ಳುತ್ತೇವೆ ಎಂದರು. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಹೊರ ಠಾಣೆ ಬೇಡಿಕೆ ಬಗ್ಗೆ, ಎಸ್ಪಿ ಅವರಿಂದ ಪ್ರಸ್ತಾವನೆ ಬಂದಲ್ಲಿ ಪರಿಶೀಲನೆ ನಡೆಸಿ. ಕ್ರಮಕೈಗೊಳ್ಳುತ್ತೇವೆ ಎಂದರು.

ಮಂಗಳೂರಿನ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ, ಸಾಧಕ-ಬಾಧಕಗಳನ್ನು ಸಂಗ್ರಹಿಸಿ ತೀರ್ಮಾಣ ಕೈಗೊಳ್ಳುತ್ತೇವೆ ಎಂದರು. ಈಗ ಎರಡು ಠಾಣೆಗಳಿಗೆ ಒಂದು112 ಪೊಲೀಸ್ ವಾಹನ ಇದು, ಒಂದು ಠಾಣೆಗೆ ಒಂದು ವಾಹನ ಬೇಕು ಎಂಬ ಬೇಡಿಕೆಯಂತೆ 112ವನ್ನು ಹೆಚ್ಚು ಮಾಡುತ್ತೇವೆ. ಕೇಂದ್ರ ಸರಕಾರದ ಆದೇಶದ ಪ್ರಕಾರ 15 ವರ್ಷಗಳಾದ ವಾಹನಗಳನ್ನು ತೆಗೆಯುತ್ತಿದ್ದೇವೆ. ಅಲ್ಲಿಗೆ ಹೊಸ ವಾಹನ ನೀಡಲಾಗುತ್ತಿದೆ. 112 ಉಪಯೋಗ ಜಾಸ್ತಿಯಿದ್ದ, ಆ ವಾಹನವನ್ನೂ ಹೆಚ್ಚು ಮಾಡುತ್ತೇವೆ ಎಂದರು. ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸಬೇಕು ಎಂಬ ಬೇಡಿಕೆ ಬಗ್ಗೆ ಗಮನ ಹರಿಸುತ್ತೇವೆ ಎಂದರು.

Leave a Reply

Your email address will not be published. Required fields are marked *