Thu. Jul 10th, 2025

Ullala: ತಾನು ಕೆಲಸ ಮಾಡುತ್ತಿದ್ದ ಟೈಲರಿಂಗ್‌ ಶಾಪ್‌ನಲ್ಲಿಯೇ ಕುಸಿದು ಬಿದ್ದು ನವವಿವಾಹಿತ ಸಾವು

ಉಳ್ಳಾಲ:(ಜು.10)ತಾನು ಕೆಲಸ ಮಾಡುತ್ತಿದ್ದ ಟೈಲರಿಂಗ್‌ ಶಾಪ್‌ನಲ್ಲಿಯೇ ಕುಸಿದು ಬಿದ್ದ ಮಂಜನಾಡಿ ಗ್ರಾಮದ ನವ ವಿವಾಹಿತನೊಬ್ಬ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿರುವ ಘಟನೆ ನಡೆದಿದೆ.

ಇದನ್ನೂ ಓದಿ: 🔴ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ

ಉಳ್ಳಾಲ ತಾಲೂಕಿನ ಮಂಜನಾಡಿ ನಿವಾಸಿ ಭರತ್‌ (32) ಸಾವಿಗೀಡಾದ ಯುವಕ. ಮಂಗಳೂರು ನಗರದ ಫಾರಮ್‌ ಮಾಲ್‌ನಲ್ಲಿ ಟೈಲರ್‌ ವೃತ್ತಿ ಮಾಡುತ್ತಿದ್ದ ಭರತ್‌ ನಾಲ್ಕು ದಿನದ ಹಿಂದೆ ಆಘಾತಕಾರಿ ಸುದ್ದಿಯನ್ನು ಕೇಳಿ ಟೈಲರ್‌ ಶಾಪಿನಲ್ಲಿ ಕುಸಿದು ಬಿದ್ದಿದ್ದರು ಎಂದು ವರದಿಯಾಗಿದೆ. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವಿಗೀಡಾಗಿದ್ದಾರೆ.

ಕಳೆದ ಎಪ್ರಿಲ್‌ ತಿಂಗಳ 22 ರಂದು ಭರತ್‌ ಅವರ ವಿವಾಹ ನಡೆದಿದೆ. ಪತ್ನಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿ.

Leave a Reply

Your email address will not be published. Required fields are marked *