Fri. Jul 11th, 2025

ಬೆಳ್ತಂಗಡಿ : ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು – ಸಚಿವ ದಿನೇಶ್ ಗುಂಡೂರಾವ್ ರವರಿಗೆ ಅಭಿನಂದನೆ

ಬೆಳ್ತಂಗಡಿ :(ಜು.11) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆಯನ್ನು ಸರ್ಕಾರ ಮಂಜೂರು ಗೊಳಿಸಿದ್ದು, ಶಾಲೆಯನ್ನು ಮಂಜೂರಾತಿಗೊಳಿಸುವಲ್ಲಿ ಸಂಪೂರ್ಣ ಸಹಕಾರ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಮಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಇದನ್ನೂ ಓದಿ: ⭕ತಂದೆಯ ಗುಂಡೇಟಿಗೆ ಬಲಿಯಾದ ಮಗಳು

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್ ಮಾಲಾಡಿ, ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ,

ಎಂ.ಜೆ.ಎಂ ಜುಮ್ಮಾ ಮಸೀದಿ ಕಕ್ಕಿಂಜೆ ಇದರ ಉಪಾಧ್ಯಕ್ಷರಾದ ಇಲ್ಯಾಸ್ ಕಕ್ಕಿಂಜೆ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನ ಇಂಟಕ್ ಘಟಕದ ಅಧ್ಯಕ್ಷ ಬಿ ಅಶ್ರಫ್ ನೆರಿಯ, ಎಂ.ಜೆ .ಎಂ ಜುಮ್ಮಾ ಮಸೀದಿ ಕಕ್ಕಿಂಜೆ ಇದರ ಗೌರವ ಅಧ್ಯಕ್ಷ ರಾದ.ಕೆ.ಎ ರಹಿಮಾನ್, ಕಕ್ಕಿಂಜೆ ಅಣಿಯೂರು ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಖಾದರ್ ಬೀಟಿಗೆ, ಪ್ರಮುಖರಾದ ಸಂಶುದ್ದೀನ್ ಬೀಟಿಗೆ ಕಕ್ಕಿಂಜೆ ಅಣಿಯೂರು ಶಾಲೆ ಎಸ್ ಡಿ ಎಂ ಸಿ ಸದಸ್ಯ ಹಕೀಂ ಜಿ ಕೆ,. ಪ್ರಮುಖರಾದ ರತ್ನಕರ ಪೂಜಾರಿ ಚಿಬಿದ್ರೆ, ಜೋಯಿ ಜೋಯಲ್ ಕಾಂಜಾಲ್ ಚಿಬಿದ್ರೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *