Sat. Jul 12th, 2025

ಧರ್ಮಸ್ಥಳ: ಧರ್ಮಸ್ಥಳ ಶ್ರೀ.ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

ಧರ್ಮಸ್ಥಳ:(ಜು.12) ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆಯು ನಡೆಯಿತು.

ಇದನ್ನೂ ಓದಿ: 🟢ಬೆಳಾಲು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕುರಿತ ಉಪನ್ಯಾಸ ಮಾಲೆ, ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ


ಶ್ರೀ ಧ.ಮಂ.ಎಜುಕೇಶನ್ ಸೊಸೈಟಿ ಉಜಿರೆ ಇಲ್ಲಿಯ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಯಾದ ಶ್ರೀ ಧನ್ಯ ಕುಮಾರ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ಪೋಷಕರನ್ನು ಕುರಿತು ಮಾತನಾಡಿದ ಇವರು ಮಕ್ಕಳಿಗೆ ಮನೆಯಿಂದಲೇ ಶಿಸ್ತಿನ ಬಗ್ಗೆ ಪಾಠವನ್ನು ಹೇಳಬೇಕು. ಪ್ರತಿಯೊಂದು ಮಗುವಿನ ಚಲನ ವಲನಗಳನ್ನು ಅರಿತು ಸೂಕ್ತ ರೀತಿಯ ಮಾರ್ಗದರ್ಶನಗಳನ್ನು ನೀಡಬೇಕು. ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದರು.


ಶ್ರೀ ಜೋಸೆಫ್ ಇವರು ಶಾಲಾ ಸಮಗ್ರ ಮಾಹಿತಿಯನ್ನು ನೀಡಿದರು. 2025-26ನೇ ಶೈಕ್ಷಣಿಕ ವರ್ಷದ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾದ ಶ್ರೀ ರಾಜೇಶ್, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಕಮಲ್ ತೇಜ್ ರಜಪೂತ್, ಹಿರಿಯ ಶಿಕ್ಷಕರಾದ ಶ್ರೀ ಜೋಸೆಫ್, ಶ್ರೀಮತಿ ಶ್ರೀಜಾ ಎ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ಪ್ರಾರ್ಥಿಸಿದರು .ಶ್ರೀಮತಿ ಪೂರ್ಣಿಮಾ ಕೆ. ಎಂ ನಿರೂಪಿಸಿದ ಈ ಕಾರ್ಯಕ್ರಮಕ್ಕೆ ಶ್ರೀಮತಿ ಕಾವ್ಯ ಸ್ವಾಗತಿಸಿ ಶ್ರೀಮತಿ ಉಷಾ ಇವರು ಧನ್ಯವಾದವಿತ್ತರು.

Leave a Reply

Your email address will not be published. Required fields are marked *