ಬೆಂಗಳೂರು:(ಜು. 13) ಕಿರುತೆರೆ ನಟಿ ಶ್ರುತಿ ಅಲಿಯಾಸ್ ಮಂಜುಳಾ ಮೇಲೆ ಪತಿಯಿಂದಲೇ ಚಾಕು ಇರಿತ ಆದ ಸುದ್ದಿ ಕೇಳಿ ಎಲ್ಲರಿಗೂ ಶಾಕ್ ಆಗಿತ್ತು. ಶ್ರುತಿ ಪತಿ ಅಮರೇಶ್ ಈಗ ಪೊಲೀಸರ ವಶದಲ್ಲಿ ಇದ್ದಾರೆ. ಪೊಲೀಸರ ವಿಚಾರಣೆ ವೇಳೆ ಅಮರೇಶ್ ಅನೇಕ ವಿಚಾರ ಬಾಯ್ಬಿಟ್ಟಿದ್ದಾರೆ.

ಇದನ್ನೂ ಓದಿ: ⭕ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಕೊಲೆ ಮಾಡಲು ಬಂದ ಗಂಡನಿಂದ ಶ್ರುತಿ ಬಚಾವಾಗಿದ್ದು ಹೇಗೆ ಎಂಬುದು ಈಗ ಗೊತ್ತಾಗಿದೆ. ಹನುಮಂತನಗರ ಠಾಣೆ ಪೊಲೀಸರು ವಿಚಾರಣೆ ಮಾಡಿದಾಗ ಪತ್ನಿ ಮೇಲೆಯೇ ಅಮರೇಶ್ ಹಲವು ಆರೋಪ ಮಾಡಿದ್ದಾರೆ. ನಾವು 20 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದು. ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಶ್ರೀನಗರದಲ್ಲಿ ಪ್ಲಾಟ್ ಒಂದನ್ನ 27 ಲಕ್ಷ ರೂಪಾಯಿ ಕೊಟ್ಟು ಲೀಸ್ಗೆ ಹಾಕಿಕೊಂಡು ವಾಸ ಮಾಡ್ತಿದ್ವಿ. ಇಬ್ಬರು ಹೆಣ್ಣು ಮಕ್ಕಳಿಗೆ ತಾಯಿ ಪ್ರೀತಿಯನ್ನು ಶ್ರುತಿ ಕೊಟ್ಟಿಲ್ಲ. ಮನೆ ಜವಾಬ್ದಾರಿಯನ್ನೆಲ್ಲ ನಾನೇ ನೋಡಿಕೊಳ್ತಿದ್ದೆ. ಶೂಟಿಂಗ್ ನೆಪದಲ್ಲಿ ಸರಿಯಾಗಿ ಮನೆಗೆ ಬಾರದೇ ಪಾರ್ಟಿ ಪಬ್ ಅಂತ ಸುತ್ತಾಡ್ತಿದ್ಲು ಎಂದು ಅಮರೇಶ್ ಹೇಳಿಕೆ ನೀಡಿದ್ದಾರೆ.

ಯಾರಿಗೂ ಹೇಳದೇ 15 ದಿನ ಪ್ರಯಾಗ್ ರಾಜ್ಗೆ ಟ್ರಿಪ್ ಹೋಗಿದ್ದಳು. ಇದೇ ವಿಚಾರಕ್ಕೆ ಈ ಹಿಂದೆಯೂ ಗಲಾಟೆ ಆಗಿತ್ತು. ಗಂಡ-ಮಕ್ಕಳಿದ್ದರೂ ಕೂಡ ಅಣ್ಣನ ಜೊತೆ ಇರ್ತೀನಿ ಅಂತ ಮನೆ ಬಿಟ್ಟು ಹೋಗಿದ್ದಳು. ಎಷ್ಟೋ ರಾತ್ರಿಗಳು ಶ್ರುತಿ ಮನೆಗೆ ಬರುತ್ತಿರಲಿಲ್ಲ. ಫೋನ್ ಮಾಡಿದ್ರೆ ಏನ್ ಮಾಡ್ಕೋತಿಯೋ ಮಾಡ್ಕೋ ಎನ್ನುತ್ತಿದ್ದಳು ಎಂದು ಅಮರೇಶ್ ಆರೋಪಿಸಿದ್ದಾರೆ.

ಕಳೆದ ವಾರ ರಾಜಿ ಸಂಧಾನ ಆದ ಮೇಲೂ ಮತ್ತೆ ಮನೆಗೆ ಸರಿಯಾಗಿ ಬರುತ್ತಿರಲಿಲ್ಲ. ಹೀಗಾಗಿಯೇ ಆಕೆಯನ್ನು ಕೊಲೆ ಮಾಡಿ ಇದಕ್ಕೆಲ್ಲ ಇತಿಶ್ರೀ ಹಾಡೋಣ ಅಂತಿದ್ದೆ. ಆದ್ರೆ ಕೊಲೆ ಮಾಡುವಾಗ ಕಾಲಿಗೆ ಬಿದ್ದು ಕ್ಷಮೆ ಕೇಳಿದಳು. ನೀನು ಹೇಳಿದ ರೀತಿ ನಾನು ಕೇಳುತ್ತೇನೆ ಎಂದು ಕಾಲಿಗೆ ಬಿದ್ದಳು. ಹೆಂಡತಿ ಇನ್ಮೇಲಾದ್ರೂ ಬದಲಾಗ್ತಾಳೆ ಅಂತ ಕೊಲೆ ಮಾಡೋದನ್ನು ಬಿಟ್ಟು ಸುಮ್ಮನಾದೆ’ ಎಂದು ಪೊಲೀಸರ ಮುಂದೆ ಅಮರೇಶ್ ಹೇಳಿಕೆ ಕೊಟ್ಟಿದ್ದಾರೆ. ಹನುಮಂತನಗರ ಪೊಲೀಸರು ಅಮರೇಶ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಚಾಕು ಇರಿತದ ಬಳಿಕ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

