Tue. Jan 13th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Crime : ಮದುವೆ ಪಾರ್ಟಿಯಲ್ಲಿ ಚಿಕನ್ ಪೀಸ್​ಗಾಗಿ ಜಗಳ – ಸ್ನೇಹಿತನ ಕೊಲೆ

ಬೆಳಗಾವಿ (ಜು.15): ಯರಗಟ್ಟಿ ತಾಲೂಕಿನ ಸೊಪಡ್ಲ ಗ್ರಾಮದ ಹೊರ ವಲಯದಲ್ಲಿ ರಾತ್ರಿ ನಡೆದ ಎಣ್ಣೆ ಪಾರ್ಟಿಯಲ್ಲಿ ಚಿಕನ್ ಪೀಸ್​ಗಾಗಿ ಓರ್ವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ವಿನೋದ್ ಮಲಶಟ್ಟಿ (30 ವರ್ಷ) ಕೊಲೆಯಾದ ಯುವಕ. ವಿಠ್ಠಲ್​ ಹಾರಗೊಪ್ಪ ಕೊಲೆ ಮಾಡಿದ ಆರೋಪಿ.

ಇದನ್ನೂ ಓದಿ: ⭕ಬೆಳ್ತಂಗಡಿ : ತಾಲೂಕು ಕಚೇರಿಯ ಪ್ರಥಮದರ್ಜೆ ಸಹಾಯಕ ಹೃದಯಾಘಾತದಿಂದ ಸಾವು

ಮೃತ ವಿನೋದ್​ ಕೂಲಿ ಕೆಲಸ ಮಾಡಿಕೊಂಡು ಸಂಸಾರದ ಬಂಡಿಯನ್ನು ಎಳೆದುಕೊಂಡು ಹೋಗುತ್ತಿದ್ದನು. ವಿನೋದ್ ಮಲಶೆಟ್ಟಿಯ ಸ್ನೇಹಿತ ಅಭಿಷೇಕ್ ಕೊಪ್ಪದ ಎಂಬುವವರು ಎರಡು ತಿಂಗಳ ಹಿಂದೆ ಮದುವೆಯಾಗಿದ್ದಾರೆ. ಮದುವೆಯಾದ ಸಂಭ್ರಮದಲ್ಲಿ ಅಭಿಷೇಕ್ ‌ ತನ್ನ ಸ್ನೇಹಿತರಾದ ವಿನೋದ್ ಮಲಶೆಟ್ಟಿ ಹಾಗೂ ವಿಠ್ಠಲ್ ಹಾರೋಗೊಪ್ಪ ಸೇರಿದಂತೆ 30ಕ್ಕೂ ಹೆಚ್ಚು ಜನರಿಗೆ ಸೊಪಡ್ಲ ಗ್ರಾಮದ ಹೊರ ವಲಯದಲ್ಲಿ ಎಣ್ಣೆ ಪಾರ್ಟಿ ಆಯೋಜನೆ ಮಾಡಿದ್ದರು.

ಪಾರ್ಟಿಯಲ್ಲಿ ಚಿಕನ್​ ಪೀಸ್​ಗಾಗಿ ವಿನೋದ​ನು​ ವಿಠ್ಠಲ್ ಹಾರಗೊಪ್ಪ ಜೊತೆ ಜಗಳ ತೆಗೆದಿದ್ದಾನೆ. ಜಗಳ ತಾರಕಕ್ಕೇರಿದೆ. ಆಗ, ವಿಠ್ಠಲ್ ಹಾರಗೊಪ್ಪ ಅಡುಗೆಗೆ ಬಳಸಿದ್ದ ಚಾಕುವಿನಿಂದ ವಿನೋದ್​ನ ಎದೆಗೆ ಇರಿದು ಕೊಲೆ ಮಾಡಿದ್ದಾನೆ. ಘಟನೆ ನಡೆದ ತಕ್ಷಣ ಮುರಗೋಡ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚುವರಿ ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದರು. ಕೊಲೆ ಮಾಡಿದ ಆರೋಪಿ ವಿಠ್ಠಲ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೇವಲ ಚಿಕನ್​ಗಾಗಿ ಜಗಳ ನಡೆಯಿತಾ? ಅಥವಾ ಬೇರೆ ಏನಾದರು ಕಾರಣ ಇದೆಯಾ? ಪಾರ್ಟಿಯಲ್ಲಿ ಸಾಕಷ್ಟು ಜನ ಸ್ನೇಹಿತರು ಇದ್ದರೂ ಕೂಡ ಏಕೆ ಕೊಲೆಯನ್ನು ತಡೆಯಲಿಲ್ಲ ಎಂಬ ಅನುಮಾನ ಮುರುಗೋಡ ಪೊಲೀಸರಿಗೆ ಮೂಡಿದ್ದು ತನಿಖೆ ನಡೆಸುತ್ತಿದ್ದಾರೆ.

ಚಿಕನ್ ವಿಷಯಕ್ಕೆ ಜಗಳವಾದರೂ ಇಬ್ಬರ ನಡುವೆ ಆಗಾಗ ಹಣಕಾಸಿನ ವಿಚಾರಕ್ಕೂ ಕೂಡ ಗಲಾಟೆಯಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದ್ದು, ಈ ಆಯಾಮದಲ್ಲೂ ಕೂಡ ತನಿಖೆ ನಡೆಯುತ್ತಿದೆ. ಒಟ್ಟಾರೆಯಾಗಿ ಖುಷಿ ಖುಷಿಯಾಗಿ ನಡೆಯಬೇಕಿದ್ದ ಮದುವೆ ಪಾರ್ಟಿಯಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.

Leave a Reply

Your email address will not be published. Required fields are marked *